Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಜಾಬ್ ಹಿಂದಕ್ಕೆ ಪಡೆಯುತ್ತೇನೆಂದು ಹೇಳಿಯೇ ಇಲ್ಲ : ಸಿಎಂ ಸಿದ್ದರಾಮಯ್ಯ

---Advertisement---

ಮೈಸೂರು: ರಾಜ್ಯದಲ್ಲಿ ಮತ್ತೆ ಹಿಜಾಬ್ ವಿಚಾರ ಬಾರೀ ಚರ್ಚೆಗೆ ಗ್ರಾಸವಾಗಿದೆ. ಇತ್ತಿಚೆಗಷ್ಟೇ ಹಿಜಾಬ್ ಮೇಲಿನ ನಿಷೇಧದ ಆದೇಶವನ್ನು ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಿಜೆಪೊ ನಾಯಕರ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ನಾನು ಹಿಜಾಬ್ ಆದೇಶ ಹಿಂಪಡೆಯುತ್ತೇನೆ ಅಂತ ಹೇಳಿಯೇ ಇಲ್ಲ ಎಂದಿದ್ದಾರೆ.

ಹಿಜಾಬ್ ನಿಷೇಧದ ಆದೇಶ ಹಿಂಪಡೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ. ಯಾವ ಶೈಕ್ಷಣಿಕ ವರ್ಷದಿಂದ ಹಿಂಪಡೆಯಬೇಕು ಎಂಬುದರ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸುತ್ತೇನೆ. ಸಚಿವ ಸಂಪುಟದಲ್ಲಿಯೂ ಈ ಬಗ್ಗೆ ಚರ್ಚೆ ನಡೆಸಲಿದ್ದೇವೆ ಅಂತಷ್ಟೇ ಹೇಳಿದ್ದು. ನಿಷೇಧ ಮಾಡಿರುವುದನ್ನು ಇನ್ನೂ ವಾಪಸ್ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಬಿಜೆಪಿ ಸರ್ಕಾರದಲ್ಲಿ ಹಿಜಾಬ್ ಅನ್ನು ನಿಷೇಧ ಮಾಡಲಾಗಿತ್ತು. ಈ ವಿಚಾರ ಇಡೀ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಕೋರ್ಟ್ ನಲ್ಲಿ ಕೇಸ್ ಕೂಡ ಇದೆ. ಸರ್ಕಾರದ ಆದೇಶವನ್ನೆ ಕೋರ್ಟ್ ಎತ್ತಿ ಹಿಡಿದಿದೆ. ಶಾಲಾ ಆವರಣ ಒಳಗೆ ಹಿಜಾಬ್ ಧರಿಸಿ ಹೋಗುವುದಕ್ಕೆ ಅನುಮತಿ ಇಲ್ಲ. ಹೀಗಾಗಿ ಹಲವು ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳು ಶಾಲೆಗೆ ಹೋಗದೆ, ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರು, ಉಡುಗೆ ಅವರವರ ಇಷ್ಟ ಎಂದು ಹೇಳಿದ್ದು, ಚರ್ಚೆಗೆ ಗ್ರಾಸವಾಗಿದೆ. ಹಿಜಾಬ್ ಬಗ್ಗೆ ನೀಡಿದ ಹೇಳಿಕೆಗೆ ಬಾರೀ ಟೀಕೆ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ಮೇಲೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಅವರ ಹೇಳಿಕೆಯನ್ನು ಇಂದು ಮತ್ತೊಮ್ಮೆ ಹೇಳಿ, ಸ್ಪಷ್ಟನೆ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...