Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೈಮುಗಿದು ಮನವಿ ಮಾಡುವೆ, ರಾಜಕಾರಣದ ಸುದ್ದಿಗೆ ಬರಬೇಡಿ : ಸ್ವಾಮೀಜಿಗಳಿಗೆ ಹೇಳಿದ ಡಿಕೆಶಿ

ಡಿಕೆ ಶಿವಕುಮಾರ್
---Advertisement---

 

ಬೆಂಗಳೂರು: ಕೆಂಪೇಗೌಡ ಜಯಂತಿಯಂದು ತುಂಬಿದ್ದ ವೇದಿಕೆಯಲ್ಲಿ ಚಂದ್ರಶೇಖರ ಸ್ವಾಮೀಜಿ ಅವರು ಸಿಎಂ ಬದಲಾವಣೆಯ ವಿಚಾರವನ್ನು ಮಾತನಾಡಿದ್ದರು. ಸಿಎಂ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಿದ್ದರು. ಇನ್ಮುಂದೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟು ಕೊಡಿ ಎಂದಿದ್ದರು. ಸ್ವಾಮೀಜಿ ಹೇಳಿದ ವಿಚಾರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಮೀಜಿಗಳಿಗೆ ಮನವಿ ಮಾಡಿಕೊಂಡಿದ್ದು, ಸಚುವರು, ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ಪಕ್ಷವನ್ನು ಎಷ್ಟು ಕಷ್ಟಪಟ್ಟು ಅಧಿಕಾರಕ್ಕೆ ತಂದಿದ್ದೇವೆ. ನಿಮಗೂ ಗೊತ್ತು. ನಿಮ್ಮ ಬಾಯಿಗೆ ಬೀಗ ಹಾಕಿ. ಇಲ್ಲದಿದ್ದರೆ ಪಕ್ಷದಿಂದ ನೋಟೀಸ್ ಜಾರಿ ಮಾಡಬೇಕಾಗುತ್ತದೆ‌. ನನಗೆ ಯಾರ ರೆಕಮೆಂಡೇಶನ್ ಕೂಡ ಬೇಡ. ಆಶೀರ್ವಾದವೊಂದಿದ್ದರೆ ಸಾಕು. ರಾಜ್ಯದಲ್ಲಿ ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ ಎಂದಿದ್ದಾರೆ.

ಇದೆ ವೇಳೆ ಸ್ಚಾಮೀಜಿಗಳ ಬಗ್ಗೆಯೂ ಮನವಿ ಮಾಡಿದ ಡಿಕೆ ಶಿವಕುಮಾರ್, ರಾಜರಾಕಣದ ವಿಚಾರಕ್ಕೆ ನೀವೂ ಬರಲು ಹೋಗಬೇಡಿ. ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿಯುವೆ. ಚಂದ್ರಶೇಖರ ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತನಾಡಿದ್ದಾರೆ. ನಿನ್ನೆ ನಾವೆಲ್ಲಾ ಎಂಪಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಎಲ್ಲರೂ ಕೂಡ ಬಂದಿದ್ದರು. ಮುಕ್ತವಾಗಿ ಅಲ್ಲಿ ಚರ್ಚೆಯಾಗಿದೆ. ನಾನು, ಖರ್ಗೆ ಹಾಗೂ ಸಿದ್ದರಾಮಯ್ಯ ಅವರು ಕೂತು ಮಾತನಾಡಿದ್ದೇವೆ. ಪಕ್ಷದ ಹಿತದೃಷ್ಟಿಯಿಂದ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಎಂಎಲ್ಎ ಕೂಡ ಮಾತನಾಡುವ ಅಗತ್ಯವಿಲ್ಲ‌. ಎಐಸಿಸಿಯವರು ಹಾಗೂ ನಾನು ವಿಧಿಯಿಲ್ಲದೆ ನೋಟೀಸ್ ನೀಡಬೇಕಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment