ಕೈಮುಗಿದು ಮನವಿ ಮಾಡುವೆ, ರಾಜಕಾರಣದ ಸುದ್ದಿಗೆ ಬರಬೇಡಿ : ಸ್ವಾಮೀಜಿಗಳಿಗೆ ಹೇಳಿದ ಡಿಕೆಶಿ

 

ಬೆಂಗಳೂರು: ಕೆಂಪೇಗೌಡ ಜಯಂತಿಯಂದು ತುಂಬಿದ್ದ ವೇದಿಕೆಯಲ್ಲಿ ಚಂದ್ರಶೇಖರ ಸ್ವಾಮೀಜಿ ಅವರು ಸಿಎಂ ಬದಲಾವಣೆಯ ವಿಚಾರವನ್ನು ಮಾತನಾಡಿದ್ದರು. ಸಿಎಂ ಸಿದ್ದರಾಮಯ್ಯ ಅವರಿಗೂ ಮನವಿ ಮಾಡಿದ್ದರು. ಇನ್ಮುಂದೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟು ಕೊಡಿ ಎಂದಿದ್ದರು. ಸ್ವಾಮೀಜಿ ಹೇಳಿದ ವಿಚಾರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಮೀಜಿಗಳಿಗೆ ಮನವಿ ಮಾಡಿಕೊಂಡಿದ್ದು, ಸಚುವರು, ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ಪಕ್ಷವನ್ನು ಎಷ್ಟು ಕಷ್ಟಪಟ್ಟು ಅಧಿಕಾರಕ್ಕೆ ತಂದಿದ್ದೇವೆ. ನಿಮಗೂ ಗೊತ್ತು. ನಿಮ್ಮ ಬಾಯಿಗೆ ಬೀಗ ಹಾಕಿ. ಇಲ್ಲದಿದ್ದರೆ ಪಕ್ಷದಿಂದ ನೋಟೀಸ್ ಜಾರಿ ಮಾಡಬೇಕಾಗುತ್ತದೆ‌. ನನಗೆ ಯಾರ ರೆಕಮೆಂಡೇಶನ್ ಕೂಡ ಬೇಡ. ಆಶೀರ್ವಾದವೊಂದಿದ್ದರೆ ಸಾಕು. ರಾಜ್ಯದಲ್ಲಿ ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ ಎಂದಿದ್ದಾರೆ.

ಇದೆ ವೇಳೆ ಸ್ಚಾಮೀಜಿಗಳ ಬಗ್ಗೆಯೂ ಮನವಿ ಮಾಡಿದ ಡಿಕೆ ಶಿವಕುಮಾರ್, ರಾಜರಾಕಣದ ವಿಚಾರಕ್ಕೆ ನೀವೂ ಬರಲು ಹೋಗಬೇಡಿ. ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿಯುವೆ. ಚಂದ್ರಶೇಖರ ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತನಾಡಿದ್ದಾರೆ. ನಿನ್ನೆ ನಾವೆಲ್ಲಾ ಎಂಪಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಎಲ್ಲರೂ ಕೂಡ ಬಂದಿದ್ದರು. ಮುಕ್ತವಾಗಿ ಅಲ್ಲಿ ಚರ್ಚೆಯಾಗಿದೆ. ನಾನು, ಖರ್ಗೆ ಹಾಗೂ ಸಿದ್ದರಾಮಯ್ಯ ಅವರು ಕೂತು ಮಾತನಾಡಿದ್ದೇವೆ. ಪಕ್ಷದ ಹಿತದೃಷ್ಟಿಯಿಂದ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಎಂಎಲ್ಎ ಕೂಡ ಮಾತನಾಡುವ ಅಗತ್ಯವಿಲ್ಲ‌. ಎಐಸಿಸಿಯವರು ಹಾಗೂ ನಾನು ವಿಧಿಯಿಲ್ಲದೆ ನೋಟೀಸ್ ನೀಡಬೇಕಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

11 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

48 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago