Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಸಿಕೊಂಡರೆ ಮೈ ನಡುಗುತ್ತೆ : ಸಚಿವರಿಗೆ ಕುಮಾರಸ್ವಾಮಿ ತಿರುಗೇಟು

---Advertisement---

 

 

ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ರೈತರ ಬಗ್ಗೆ ನೀಡಿದ್ದ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದರು. ಶಿವಾನಂದ ಪಾಟೀಲ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಇದೀಗ ಸಚಿವರ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು.

ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿ ವರ್ಷ ಬರಗಾಲ ಬರಲಿ, ಸರ್ಕಾರ ಸಾಲಮನ್ನಾ ಮಾಡಲಿ ಎಂಬುದು ರೈತರ ಬಯಕೆಯಾಗಿದೆ ಎಂದು ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಪಕ್ಷ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರೆ, ಸ್ವಪಕ್ಷದವರಿಗೇನೆ ಮುಜುಗರ ತರುವಂತ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ವಿರೋಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...