Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿಎಂ ಆಗಲು ಆಸೆ ಇದೆ.. ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯೂ ಇದೆ : ಸತೀಶ್ ಜಾರಕಿಹೊಳಿ

---Advertisement---

ಹಾವೇರಿ: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ಚರ್ಚೆ ಹಾಗೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಚರ್ಚೆ ಆಗಾಗ ಜೋರಾಗಿ ಸುಮ್ಮನಾಗುತ್ತದೆ. ಕಾಂಗ್ರೆಸ್ ಒಳಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಸಿಎಂ ಹುದ್ದೆಗೆ ಸಚಿವ ಸತೀಶ್ ಜಾರಕಿಹೊಳಿ ಹೆಸರು ಕೂಡ ಆಗಾಗ ಕೇಳಿ ಬರುತ್ತದೆ. ಆಮೇಲೆ ಸುಮ್ಮನಾಗುತ್ತದೆ. ಇದೀಗ ಅವರೇ ಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಬಗ್ಗೆ ಮಾತನಾಡಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಮುಖ್ಯಮಂತ್ರಿಯಾಗಲು ಆಸೆ ಇದೆ. ಕೆಪಿಸಿಸಿ ಅಧ್ಯಕ್ಷನಾಗುವುದಕ್ಕೂ ಆಸೆ ಇದೆ. ಮಂತ್ರಿ ಆಗುವುದಕ್ಕೂ ಆಸೆ ಇದೆ. ಈ ಹಿಂದೆ ಕೂಡ ಸಿಎಂ ಆಗ್ತಾರೆ ಅಂತ ನನ್ನ ಹೆಸರು ಓಡಾಡ್ತಾ ಇತ್ತು. ಈಗ ಅಧ್ಯಕ್ಷ ಆಗ್ತಾರೆ ಅಂತ ಹೆಸರು ಓಡಾಡ್ತಾ ಇದೆ ಎಂದಿದ್ದಾರೆ.

ಇದೆಲ್ಲ ನಮ್ಮ ಉತ್ಸಾಹ ಅಷ್ಟೇ. ಅಂತಿಮವಾಗಿ ಪಕ್ಷ ತೀರ್ಮಾನ ಮಾಡಬೇಕು. ನಾವೆಲ್ಲಾ ಕಾದು ನೋಡಬೇಕು. ಈ ವಿಚಾರವಾಗಿ ನಾನು ಯಾವುದೇ ರೀತಿಯ ಒತ್ತಡ ಹಾಕಿಲ್ಲ. ಉಪಚುನಾವಣೆಯಲ್ಲಿ ಗೆಲ್ಲಿಸಿದ್ದೇವೆ. ತೃಪ್ತಿ ಇದೆ. ಮಂತ್ರಿಯಾಗಿ ಕೆಲಸ ಮಾಡ್ತಾ ಇದ್ದೇವೆ. ತೃಪ್ತಿ ಇದೆ. ಅಧ್ಯಕ್ಷರ ಹುದ್ದೆಯನ್ನು ಅಹಿಂದ ನಾಯಕರಿಗೆ ಕೊಡಬೇಕು ಎಂಬ ಒತ್ತಾಯವಿದೆ. ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡಬೇಕು. ಯಾರಿಗೆ ಕೊಡಬೇಕು..? ಯಾಕೆ ಕೊಡಬೇಕು..? ಅದರಿಂದಾಗುವ ಲಾಭವೇನು..? ಇದೆಲ್ಲವನ್ನು ಚರ್ಚಿಸಿ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ ಎಂದು ತಮಗೂ ಸಿಎಂ ಆಗುವ ಬಯಕೆ ಇದೆ ಎಂಬುದನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೂಡ ಬದಲಾಯಿಸಬೇಕೆಂಬ ಚರ್ಚೆಯಾಗುತ್ತಿದ್ದು, ಯಾರಿಗೆ ನೀಡ್ತಾರೆ ಎಂಬುದನ್ನು ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...