Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ : ದೇಶಪಾಂಡೆ ಅಚ್ಚರಿಯ ಹೇಳಿಕೆ..!

---Advertisement---

ಮೈಸೂರು: ಈಗಾಗಲೇ ಕಾಂಗ್ರೆಸ್ ಸರ್ಕಾರದಲ್ಲಿ ಒಂದು ಕಡೆ ಮೂಡಾ ಹಗರಣದ ಸಮಸ್ಯೆಯಾದರೆ ಮತ್ತೊಂದು ಕಡೆ ಸಿಎಂ ಬದಲಾವಣೆಯ ಕೂಗು ಕೂಡ ಕೇಳಿ ಬರುತ್ತಿದೆ. ಈ ಬೆನ್ನಲ್ಲೇ ಆರ್.ವಿ.ದೇಶಪಾಂಡೆ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿದ್ದರಾಮಯ್ಯ ಅನುಮತಿ ನೀಡಿದರೆ ನಾನೇ ಸಿಎಂ ಆಗುತ್ತೇನೆ ಎಂದಿದ್ದಾರೆ.

ಫೋನ್ ಟ್ಯಾಪಿಂಗ್ ಆರೋಪ ಬಂದ ತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ರು. ಈಗ ದಿನ ಫೋನ್ ಟ್ಯಾಪ್ ನಡೆತಾ ಇದೆ. ಈಗ ಮೌಲ್ಯಾದರಿತ ರಾಜಕಾರಣ ನಡೆಯುತ್ತಿಲ್ಲ. ಹಿಂದೆ ಮೌಲ್ಯಾದರಿತ ರಾಜಕಾರಣ ಮಾಡುತ್ತಿದ್ರು, ಅದೇ ರೀತಿ ನಡೆದು ಕೊಳ್ಳುತ್ತಿದ್ದರು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗುತ್ತೇನೆ ಎಂದು ಆರ್.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಾನು ಸಚಿವ ಆಗಿ ಆಗಿ ದಣಿದಿದ್ದೇನೆ. ಇನ್ನೇನಿದ್ರು ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿರುವ ದೇಶಪಾಂಡೆ, ಹಾಗಾದ್ರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಲೈಫ್ ನಲ್ಲಿ ಆಂಭಿಷನ್ ಇರಬೇಕು. ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ರು ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. 5 ವರ್ಷ ಸಿಎಂ ಆಗಿ ಅವರೇ ಸಿದ್ದರಾಮಯ್ಯ ಇರ್ತಾರೇ. ಬದಲಾವಣೆ ಚರ್ಚೆ ನಡೆದಿಲ್ಲ. ಸದ್ಯ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿಲ್ಲ. ನ‌ನಗೆ ಗೊತ್ತಿಲ್ಲದ ಯಾವ ಚರ್ಚೆ ನಡೆಯಲು ಸಾಧ್ಯ ಇಲ್ಲ. ಪರಮೇಶ್ವರ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವ ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೇ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment