Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಂಸತ್ ಪ್ರವೇಶಿಸಿ, ಮೋದಿ ಪರ ಕೈ ಎತ್ತುತ್ತೇನೆ : ಕೆ ಎಸ್ ಈಶ್ವರಪ್ಪ

---Advertisement---

ಶಿವಮೊಗ್ಗ: ಇಂದು ಲೋಕಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಮಾತ್ರ ಶಿವಮೊಗ್ಗ ಕ್ಷೇತ್ರ. ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಎಷ್ಟೋ ವರ್ಷಗಳಿಂದ ಬಿಜೆಪಿಯಲ್ಲಿದ್ದ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿಗಳ ವಿರುದ್ಧವೇ ಬಂಡಾಯವೆದ್ದರು. ತಾವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಮೋದಿಯವರ ಫೋಟೋ ಬೇರೆ ಬಳಸಿಕೊಂಡು ಪ್ರಚಾರ ಕೂಡ ಮಾಡಿದ್ದಾರೆ. ಇದೀಗ ಇಂದು ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ, ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ‌.

 

ಮತ ಚಲಾಯಿಸಿ ಮಾತನಾಡಿದ ಈಶ್ವರಪ್ಪ, ಎಂಟು ವಿಧಾನಸಭಾ ಕ್ಷೇತ್ರಗಳ ಮತದಾರರ ಬೆಂಬಲ ನನಗೆ ಇದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಕೂಡ ತಾನೇ ಸೂಕ್ತ ವ್ಯಕ್ತಿ ಎಂದು ಪರಿಗಣಿಸಿದ್ದು, ಕನಿಷ್ಠ ಎರಡು ಲಕ್ಷ ಅಂತರದ ಮತಗಳಿಂದ ಗೆಲ್ಲುತ್ತೇನೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಲ್ಲರ ಕುತೂಹಲ ಶಿವಮೊಗ್ಗ ಕ್ಷೇತ್ರದ ಮೇಲಿದೆ. ಸತ್ಯ ಹಾಗೂ ನಾನು ಗೆಲ್ಲುತ್ತೇನೆ ಎಂಬ ನಿರೀಕ್ಷೆಯೂ ಅವರ ಮೇಲಿದೆ. ಸೋಲು ಖಚಿತ ಎಂಬುದು ಗೊತ್ತಾಗುತ್ತಿದ್ದಂತೆ ರಾಘವೇಂದ್ರ, ಈಶ್ವರಪ್ಪ ಅವರು ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ತನ್ನ ವಿರುದ್ದ ಅಪಪ್ರಚಾರ ಮಾಡಿದರು.‌ಜನರ ಮುಂದೆ ಇಂಥ ಷಡ್ಯಂತ್ರಗಳೆಲ್ಲ ನಡೆಯಲ್ಲ. ಜನರ ಮನಸ್ಸಲ್ಲಿ ತನ್ನ ಚಿಹ್ನೆ ಅಚ್ಚ ಹಾಕಿದೆ. ಯಡಿಯೂರಪ್ಪ ಅವರು ಕಾಂಗ್ರೆಸ್ ಜೊತೆಗೆ ಒಪ್ಪಂದ ಮಾಡಿಕೊಂಡು ಗೀತಾ ಶಿವರಾಜ್ ಕುಮಾರ್ ಅವರನ್ನು ಹಾಕಿಸಿಕೊಂಡರು. ಅವರೊಬ್ಬ ದುರ್ಬಲ ಅಭ್ಯರ್ಥಿ ಎಂದು. ಆದರೆ ಈ ಬಾರಿ ನಾನು ಗೆದ್ದು ಸಂಸತ್ ಪ್ರವೇಶ ಮಾಡುತ್ತೀನಿ. ಸಂಸತ್ ನಲ್ಲಿ ಮೋದಿ ಪರ ಕೈ ಎತ್ತುತ್ತೇನೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment