Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಎದುರು ಕೆಲ ದಾಖಲೆಗಳನ್ನು ನೀಡುತ್ತೇನೆ : ಕೃಷ್ಣ ಭೈರೇಗೌಡ ವಿರುದ್ಧ ಮತ್ತೊಮ್ಮೆ ಗುಡುಗಿದ ಬಿ ಆರ್ ಪಾಟೀಲ್

---Advertisement---

ಕಲಬುರಗಿ: ನಾನು ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ. ನನ್ನಲ್ಲಿ ಯಾವುದೇ ಅಂತರಂಗ, ಬಹಿರಂಗವಿಲ್ಲ. ನಾನು ಸಿಎಂ ಎದುರೇ ಕೆಲ ದಾಖಲೆಗಳನ್ನು ನೀಡುತ್ತೇನೆ ಎಂದು ಸಚಿವ ಕೃಷ್ಣ ಭೈರೇಗೌಡ ವಿರುದ್ಧ ಹಿರಿಯ ಶಾಸಕ ಬಿ ಆರ್ ಪಾಟೀಲ್ ಗುಡುಗಿದ್ದಾರೆ.

ಆಳಂದ ಪಟ್ಟಣದಲ್ಲಿ ಮಾತನಾಡಿದ ಬಿ ಆರ್ ಪಾಟೀಲ್, ನಾನೇನು ನ್ಯಾಯಾಂಗ ತನಿಖೆ ಆಯೋಗ ರಚನೆ ಮಾಡಿ ಎಂದಿಲ್ಲ. ಬದಲಾಗಿ ರಾಜಕೀಯವಾಗಿ ಚರ್ಚೆಯಾಗಲಿ, ನಾನು ಎದುರು ಕೆಲ ದಾಖಲೆಗಳನ್ನು ಇಡುತ್ತೇನೆ. ನಾನು ಯಾವುದೇ ರೀತಿಯಲ್ಲೂ ಅವಮಾನ ಮಾಡುವ ಹೇಳಿಕೆಯನ್ನು ನೀಡಿಲ್ಲ. ನಾನು ಅವತ್ತೂ ಸದನದಲ್ಲಿದ್ದೇ, ಗೂಬೆ ಕೂರಿಸುವ ಕೆಲಸ ಮಾಡುತ್ತೀರಾ ಅಂತ ಕೇಳಿದ್ದೆ. ಹೀಗಾಗಿ ಆರೋಪ ಹೊತ್ತು ಸದನಕ್ಕೆ ಹಾಜರಾಗಲ್ಲ ಎಂದು ಹೇಳಿದ್ದೇನೆ.

 

ಪ್ರಿಯಾಂಕ್ ಖರ್ಗೆ ಅವರು ಸಚಿವರಾದ ಮೇಲೆ ನನ್ನ ಕ್ಷೇತ್ರಕ್ಕೆ 10 ಯಾತ್ರಿ ನಿವಾಸ ನೀಡಿದ್ದರು. ಆದರೆ ಅದರಲ್ಲಿ ಒಂದೇ ಒಂದು ಮಾತ್ರ ಪೂರ್ಣಗೊಂಡಿದೆ. ಆ ಬಗ್ಗೆ ಪ್ರಗತಿ ಪರಿಶೀಲನ ಸಭೆ ಕೂಡ ನಡೆದಿಲ್ಲ. ಇನ್ನು ಕೆಲವು ಕಡೆ ಕಳಪೆ ಕೂಡ ಆಗಿದೆ. ಕಳಪೆ ಕಾಮಗಾರಿಯ ಬಗ್ಗೆ ಸ್ವತಃ ಸಚಿವರೇ ಒಪ್ಪಿಕೊಂಡಿದ್ದಲ್ಲ. ಭೂ ಸೇನಾ ನಿಗಮದಲ್ಲಿ ಕೆಲ ನ್ಯೂನ್ಯತೆ ಇದೆ ಎಂದು ಹೇಳಿದ್ದರು. ತಪ್ಪು ಒಪ್ಪಿದ ಮೇಲೆ ಒಬ್ಬ ಮಂತ್ರಿಯಾಗಿ ಅದನ್ನು ಸರಿ ಮಾಡಬೇಕಿತ್ತು. ಈಗ ನನ್ನ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಎನ್ನುತ್ತಾರೆ. ಇದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ಬಳಿ ಎಲ್ಲಾ ದಾಖಲೆಗಳನ್ನು ಇಡುತ್ತೀನು ಎಂದು ಸವಾಲು ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...