Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸಿದರು.

 

ಲೋಕಸಭೆ ಚುನಾವಣೆಯ ಮತದಾನ ಮುಗಿದ ಮರುದಿನ ಶನಿವಾರ ಚಾಲುಕ್ಯ ಹೋಟೆಲ್‍ನಲ್ಲಿ ಚಹ ಸೇವಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭೆ ಹಾಗೂ ಶಿರಾ ಪಾವಗಡ ಸೇರಿದಂತೆ ಮೂರು ಸಾವಿರದ ಹಳ್ಳಿಗಳಿಗೆ ಸುತ್ತಾಡಿ ಮತಯಾಚಿಸಲು ಸಮಯ ಸಾಕಾಗಲಿಲ್ಲ. ಎಷ್ಟು ಸಾಧ್ಯವೋ ಅಷ್ಟು ಕಡೆ ಮತದಾರರನ್ನು ಭೇಟಿ ಮಾಡಿ ಮತ ಕೇಳಿದ್ದೇನೆ. ಗೆಲ್ಲಿಸಿ ಪಾರ್ಲಿಮೆಂಟ್‍ಗೆ ಕಳಿಸಿಕೊಟ್ಟರೆ ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿರುವ ಜನ ದೇಶ ಸುಭದ್ರವಾಗಿರಬೇಕಾದರೆ ಯಾರ ಕೈಗೆ ಅಧಿಕಾರ ಕೊಡಬೇಕು. ಯಾರು ಈ ದೇಶದ ಪ್ರಧಾನಿಯಾಗಬೇಕೆಂಬ ಜಾಗೃತಿ ಕ್ಷೇತ್ರದ ಮತದಾರರಲ್ಲಿ ಮೂಡಿರುವುದು ಅತ್ಯಂತ ಸಂತೋಷದ ಸಂಗತಿ. ಈ ನಿಟ್ಟಿನಲ್ಲಿ ಜನ ಯೋಚಿಸಿ ಮತದಾನ ಮಾಡಿದ್ದಾರೆಂಬ ನಂಬಿಕೆಯಿದೆ. ಚುನಾವಣೆಯಲ್ಲಿ ಮಾತ್ರ ಪಕ್ಷದಿಂದ ಸ್ಪರ್ಧಿಸಿ ರಾಜಕೀಯ ಮಾಡುವುದು ಅನಿವಾರ್ಯ ಮತದಾನ ಮುಗಿದ ನಂತರ ನಾನು ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರ ಜನಪ್ರತಿನಿಧಿ. ಯಾವುದೇ ತಾರತಮ್ಯವಿಲ್ಲದೆ ನಿಸ್ಪಕ್ಷಪಾತವಾಗಿ ಎಲ್ಲರ ಸೇವೆ ಮಾಡಲು ಸಿದ್ದ ಎಂದು ತಿಳಿಸಿದರು.

ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 09  : ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ

ಮುಂಗಾರು, ಸಂಭಾವ್ಯ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಶೀಘ್ರದಲ್ಲಿ ಮುಂಗಾರು ಆರಂಭಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸದಾ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಜೂನ್ 21ರಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಕ್ಕೆ ಚುನಾವಣಾ ಆಯೋಗ ಜೂನ್ 03ರಂದು ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಸಲು

error: Content is protected !!