ಹಾಸನ: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೇನೆ ಬೆಂಬಲ ನೀಡಿ ಎಂದು ಜೆಡಿಎಸ್ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತ್ತು. ಆದರೆ ಏನು ಪ್ರಯೋಜನವಾಗಿಲ್ಲ. ಕಾಂಗ್ರೆಸ್ ತಮ್ಮ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಯೇ ಬಿಟ್ಟಿದೆ. ಜೂನ್ 10ಕ್ಕೆ ನಡೆಯುವ ಚುನಾವಣೆಗೆ ಇನ್ನು ಕೀಡ ಜೆಡಿಎಸ್ ಪ್ರಯತ್ನ ನಡೆಸುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ಹೆಚ್ ಡಿ ರೇವಣ್ಣ, ನಂಗೆ ಈ ಬಗ್ಗೆ ಎಲ್ಲಾ ಗೊತ್ತಿಲ್ಲ ಕಾಂಗ್ರೆಸ್ ಮುಖಂಡರನ್ನೇ ಕೇಳಿ ಎಂದಿದ್ದಾರೆ.
ಸಿದ್ದರಾಮಯ್ಯನವರಿಗೂ ಡಿಕೆ ಶಿವಕುಮಾರ್ ಅವರಿಗೂ ಹೇಳುತ್ತೇನೆ. ಖರ್ಗೆ ಸಾಹೇಬರಿಗೂ ಮನವಿ ಮಾಡುತ್ತೇನೆ. ದಯವಿಟ್ಟು ಬಿಜೆಪಿಯನ್ನು ದೂರ ಇಡಬೇಕು ಎಂಬ ಭಾವನೆ ಇದ್ರೆ, ಸಣ್ಣ ಪುಟ್ಟದ್ದು ಏನೇ ಇರಲಿ. ರಾಜಕಾರಣದಲ್ಲಿ ಇದೆಲ್ಲ ಇದ್ದೆ ಇರುತ್ತೆ. ಕುಮಾರಸ್ವಾಮಿ ಅವರಿಗೂ ಮನವಿ ಮಾಡುತ್ತೇನೆ.
ಇವತ್ತು ನಾವೂ ಕೋಮುವಾದಿಗಳನ್ನು ದೂರ ಇಡಬೇಕು. ಆ ದೃಷ್ಟಿಯಿಂದ ಒಟ್ಟಾಗಿ ರಾಜ್ಯಸಭೆಯಲ್ಲಿ ನಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಬೆಂಬಲ ನೀಡಿ ಎಂದು ಮತ್ತೊಮ್ಮೆ ಕೇಳಿಕೊಳ್ಳುತ್ತೇನೆ. ಸಣ್ಣ ಪುಟ್ಟದ್ದೆಲ್ಲಾ ಇರುತ್ತೆ. ಈ ಇದರಲ್ಲಿ ಅದನ್ನೆಲ್ಲಾ ಬಿಟ್ಟಾಕಬೇಕು. ದೇವೇಗೌಡ ಅವರು ಹೇಳಿದ್ದಾರೆ. ರಾಜಕೀಯ ದ್ವೇಷ ಇಟ್ಟುಕೊಳ್ಳಬಾರದು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಗೆ ಕೋಮುವಾದಿಗಳನ್ನು ದೂರ ಇಡಬೇಕೆಂಬ ಭಾವನೆ ಇದೆ. ನಾವೆಲ್ಲಾ ಒಟ್ಟಾಗಿ ಮಾಡೋಣಾ. ಒಂದು ಪ್ರಾದೇಶಿಕ ಪಕ್ಷ ಉಳಿದುಕೊಳ್ಳಲಿ. ಯಾವತ್ತಾದರೂ ಒಂದಿನ ಉಪಯೋಗಕ್ಕೆ ಬರ್ತೀವಿ ಎಂದಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…