Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ : ಕೆ.ಎನ್. ರಾಜಣ್ಣ

---Advertisement---

ತುಮಕೂರು: ಕೆ.ಎನ್.ರಾಜಣ್ಣ ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ. ಅವರ ಮಗ ರಾಜೇಂದ್ರ ಕೂಡ ರಾಜಕಾರಣದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಮಗಳನ್ನು ರಾಜಕೀಯಕ್ಕೆ ತರುವ ಯೋಚನೆ ಮಾಡ್ತಿದ್ದಾರೆ.ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ರಾಜಣ್ಣ, ಅವರ ಸಂಪುಟದಲ್ಲಿಯೇ ಸಹಕಾರಿ ಸಚಿವರಾಗಿದ್ದರು. ಆದ್ರೆ ಒಂದೇ ಒಂದು ಮಾತಿನಿಂದ ತಮ್ಮ ಸಚಿವ ಸ್ಥಾನಕ್ಕೆ ಕುತ್ತು ತಂದುಕೊಂಡರು. ಇದೀಗ ಮುಂದಿನ ಬಾರಿ ಮಹಿಳಾ ರಿಸರ್ವೇಶನ್ ಇದ್ದರೆ ನನ್ನ ಮಗಳು ರಶ್ಮಿ ರಾಜಣ್ಣರನ್ನ ಚುನಾವಣೆಗೆ ನಿಲ್ಲಿಸುತ್ತೇನೆ ಎಂದಿದ್ದಾರೆ.

ಕ್ರಾಂತಿಗಳ ಬಗ್ಗೆ ಹೆಚ್ಚು ಸದ್ದು ಮಾಡಿದ್ದವರು ರಾಜಣ್ಣ. ನವೆಂಬರ್ ಕ್ರಾಂತಿ, ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಹೇಳಿ ಸಾಕಷ್ಟು ಸಂಚಲನವನ್ನು ಮೂಡಿಸಿದ್ದರು. ಇದೀಗ ರಾಜಕಾರಣದಲ್ಲಿ ಬದಲಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಂದೊಂದು ದಿನ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗುತ್ರೆ ಎಂದುಕೊಂಡರೆ ಸುಳ್ಳು. ಸಿದ್ದರಾಮಯ್ಯ ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ. ಬಜೆಟ್ ಮಂಡನೆ ಮಾಡ್ತಿದ್ದಾರೆ ಅಂದ್ರೆ ಅಷ್ಟು ಕಾನ್ಫಿಡೆನ್ಸ್ ಇದೆ ಅಂತ ಆಯ್ತಲ್ಲ. ಅಲ್ಲಿಗೆ ಯಥಾಸ್ಥಿತಿ ಅಂತಲೇ ಅರ್ಥ ಎಂದಿದ್ದಾರೆ.

ಇದೆ ವೇಳೆ ಶಾಸಕರೆಲ್ಲಾ ಫಾರಿನ್ ಟ್ರಿಪ್ ಹೋಗ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಹೋದಷ್ಟು‌ ಫಾರಿನ್ ಟ್ರಿಪ್ ಯಾರೂ ಹೋಗಲ್ಲ. ನಾನು ಜೊತೆಯಲ್ಲಿ ಕರೆದುಕೊಂಡು ಹೋಗಲ್ಲ. ಬಂದ ಮೇಲೂ ಹೇಳುವುದಿಲ್ಲ. ದಟ್ಸ್ ಮೈ ಸ್ಟೈಲ್. ಖಾಸಗಿ ಬದುಕಲ್ಲಿ ಯಾರಾದರೂ ಶಾಸಕರು ಸ್ವಂತ ಖರ್ಚಿನಲ್ಲಿ ಹೊರಗೆ ಹೋದರೆ, ಅದು ಸರಿಯಲ್ಲ ಅಂತ ಅವಹೇಳನ ಮಾಡುವ ಪದ್ಧತಿ ಯಾಕೆ ಬರ್ತಿದೆ..? ರಾಜಕೀಯ ಅರ್ಥವನ್ನ ಯಾವ ಯಾವ ರೀತಿ ಅರ್ಥೈಸ್ತೀರೋ ಗೊತ್ತಿಲ್ಲ. ಪಾಲಿಟಿಕ್ಸ್ ಪ್ರತಿಯೊಂದರಲ್ಲೂ ಇದ್ದೇ ಇರುತ್ತದೆ. ಸದುದ್ದೇಶದಿಂದ ಮಾಡುವ ವಿದೇಶ ಪ್ರವಾಸಕ್ಕೆ ಹೋಗಿ ಬರಲಿ, ಅದನ್ನು ತಪ್ಪು ಎನ್ನುವುದು ಸರಿಯಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...