ಜೇಮ್ಸ್ ಸಿನಿಮಾಗೆ ಏನೇ ಸಮಸ್ಯೆ ಇದ್ದರೂ ಬಗೆಹರಿಸುತ್ತೇನೆ : ಸಿಎಂ ಬೊಮ್ಮಾಯಿ

1 Min Read

ಬೆಂಗಳೂರು: ಒಂದು ಕಡೆ ಆರ್ ಆರ್ ಆರ್.. ಮತ್ತೊಂದು ಕಡೆ ಕಾಶ್ಮೀರಿ ಫೈಲ್ಸ್ ಸಿನಿಮಾ. ಈ ಎರಡರಿಂದಲೂ ಜೇಮ್ಸ್ ಸಿನಿಮಾಗೆ ಸಮಸ್ಯೆಯಾಗಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ರೊಚ್ಚುಗೆದ್ದಿದ್ದಾರೆ. ಈ ಬೆನ್ನಲ್ಲೇ ಶಿವಣ್ಣ ಜೊತೆ ನಿರ್ಮಾಪಕ ಕಿಶೋರ್ ಸೇರಿದಂತೆ ಹಲವರು ಸಿಎಂ ಭೇಟಿ ಮಾಡಿದ್ದಾರೆ.

ಈ ವೇಳೆ ಸಿಎಂ ಬೊಮ್ಮಾಯಿ ಅವರು ಜೇಮ್ಸ್ ಗೆ ಯಾವುದೇ ತೊಂದರೆಯಾಗಲ್ಲ ಎಂದಿದ್ದಾರೆ. ಸಮಸ್ಯೆ ಇದ್ದರೆ ಫಿಲ್ಮ್ ಚೇಂಬರ್ ಗೆ ತಿಳಿಸಲು ನಿರ್ಮಾಪಕರಿಗೆ ಹೇಳಿದ್ದೇನೆ. ಜೇಮ್ಸ್ ಸಿನಿಮಾಗೆ ಏನೇ ಸಮಸ್ಯೆ ಇದ್ದರೂ ಅದನ್ನ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಕಾಶ್ಮೀರಿ ಫೈಲ್ಸ್ ಸಿನಿಮಾದಿಂದಾಗಿ ಜೇಮ್ಸ್ ಸಿನಿಮಾವನ್ನ ಥಿಯೇಟರ್ ತೆಗೆಯಲು ಒತ್ತಡ ಕೇಳಿ ಬಂದಿತ್ತು. ಈ ಹಿನ್ನೆಲೆ ನಿರ್ಮಾಪಕ ಕಿಶೋರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದರು. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಜೇಮ್ಸ್ ಗೆ ಸಮಸ್ಯೆ ಆಗದ ರೀತಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *