ಬೆಂಗಳೂರು: ಇಲ್ಲಿನ ವಿದ್ಯಾಶಿಲ್ಪ್ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಧನ್ವ ಯುವರಾಜ್, ಪ್ರತಿಷ್ಠಿತ ಐಸಿಎಸ್ಇ (ICSE) ರಾಷ್ಟ್ರೀಯ ಈಜು ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
14 ವರ್ಷದೊಳಗಿನವರ (U-14) 200 ಮೀಟರ್ ಬಟರ್ಫ್ಲೈ ವಿಭಾಗದ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದ ಸುಧನ್ವ, ನಿಗದಿತ ದೂರವನ್ನು ಕೇವಲ 2:39.84 ಸೆಕೆಂಡುಗಳಲ್ಲಿ ಕ್ರಮಿಸುವ ಮೂಲಕ ಮೂರನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಕೊರಳೊಡ್ಡಿದರು.

ಬೆಂಗಳೂರಿನ ಬಸವನಗುಡಿ ಅಕ್ವಾಟಿಕ್ ಸೆಂಟರ್ನಲ್ಲಿ ತರಬೇತಿ ಪಡೆಯುತ್ತಿರುವ ಸುಧನ್ವ ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ತರಬೇತುದಾರರು ಹಾಗೂ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.










