Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

16 ರಾಷ್ಟ್ರಗಳು ಒಪ್ಪಿದರೆ ಅಮಿತ್ ಶಾ ಮಗ ಅಧ್ಯಕ್ಷರಾಗಲಿದ್ದಾರಂತೆ..!

Facebook
Twitter
Telegram
WhatsApp

ನವದೆಹಲಿ: ಕೇಂದ್ರ ಗೃಹಮಂತ್ರಿ ಪುತ್ರ ಅಮಿತ್ ಶಾ ಪುತ್ರ ಜೈಶಾ ಸದ್ಯಕ್ಕೆ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ಆದರೆ ಇದೀಗ ಅದೃಷ್ಟ ಖುಲಾಯಿಸಿದ್ದು ಐಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಆದರೆ ಇದಕ್ಕೆ 16 ರಾಷ್ಟ್ರಗಳ ಒಪ್ಪಿಗೆ ಬೇಕಾಗಿದೆ. 16 ರಾಷ್ಟ್ರಗಳು ಜೈ ಶಾ ಪರವಾಗಿ ಮತ ಹಾಕಿದರೆ ಐಸಿಸಿ ಅಧ್ಯಕ್ಷರಾಗುವುದಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ.

ಭಾರತ, ಆಫ್ಘಾನಿಸ್ತಾನ್, ಆಸ್ಟ್ರೇಲಿಯಾ, ಬಾಂಗ್ಲಾದೇಶ , ಇಂಗ್ಲೆಂಡ್, ಐರ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ ದೇಶಗಳು ಬೆಂಬಲ ನೀಡಬೇಕಾಗಿದೆ. ಈ 16 ರಾಷ್ಟ್ರಗಳು ಕೂಡ ಮತದಾನದ ಅಧಿಕಾರ ಹೊಂದಿವೆ. ಮುಂದಿನ ನವೆಂಬರ್ ನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಗ್ರೇಗ್ ಬರ್ಕಲಿ ಅವರ ಅಧಿಕಾರವಧಿ ಮುಕ್ತಾಯವಾಗಲಿದೆ. ಅವರ ಜಾಗಕ್ಕೆ ಅಮಿತ್ ಶಾ ಅವರ ಪುತ್ರ ಜೈ ಶಾ ಅವರ ಹೆಸರು ಕೇಳಿ ಬರುತ್ತಿದೆ.

ಇನ್ನು ಮತದಾನದ ಹಕ್ಕು ಹೊಂದಿರುವ ಹದಿನಾರು ರಾಷ್ಟ್ರಗಳು ಕೂಡ ಜೈ ಶಾ ಅವರಿಗೆ ಬೆಂಬಲ ನೀಡಿವ ಸಾಧ್ಯತೆ ದಟ್ಟವಾಗಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ದೇಶ ಈಗಾಗಲೇ ಬೆಂಬಲ ಘೋಷಿಸಿವೆ. ಇನ್ನುಳಿದ ರಾಷ್ಟ್ರಗಳು ಜೈ ಶಾ ಅವರಿಗೆ ಮತದಾನ ಮಾಡಿದರೆ ಐಸಿಸಿ ಅಧ್ಯಕ್ಷರಾಗುವುದು ಖಚಿತ. ಈಗಾಗಲೇ ಬಿಸಿಸಿಐನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಅದೃಷ್ಟ ಚೆನ್ನಾಗಿದ್ದರೆ ಎಲ್ಲಾ ದೇಶಗಳು ಮತ ಹಾಕಿದರೆ ಜೈ ಶಾ ಐಸಿಸಿ ಅಧ್ಯಕ್ಷರಾಗುತ್ತಾರೆ. ಇನ್ನು ಜೈ ಶಾ ಅವರಿಗೆ 35 ವರ್ಷ. ಚಿಕ್ಕ ವಯಸ್ಸಿನಲ್ಲಿಯೇ ಬಹಳ ದೊಡ್ಡ ದೊಡ್ಡ ಹುದ್ದೆಗೆ ಸೇರಿದ ಕೀರ್ತಿ ಅವರದ್ದಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!