Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಾಣ ಕಳೆದುಕೊಂಡವರೆಲ್ಲ ಸಮಾನರೆ, ತಾರತಮ್ಯ ಬೇಡ : ಮಂತ್ರಾಲಯ ಸ್ವಾಮೀಜಿ

Facebook
Twitter
Telegram
WhatsApp

ರಾಯಚೂರು: ಇತ್ತೀಚೆಗೆ ಮಂಗಳೂರಿನಲ್ಲಿ ಮೂರು ಹತ್ಯೆ ನಡೆದಿದೆ. ಬಿಜೆಪಿ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ಬಳಿಕ ಅವರ ಮನೆಗೆ ಬಿಜೆಪಿ ನಾಯಕರು, ಸಿಎಂ ಬೊಮ್ಮಾಯಿ ಭೇಟಿ ನೀಡಿ ಪರಿಹಾರ ನೀಡಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಂತ್ರಾಲಯದ ಪೀಠಾಧಿಪತಿ ಸುಬುದೇಂದ್ರ ಸ್ವಾಮೀಜಿ, ಪ್ರಾಣ ಕಳೆದುಕೊಂಡವರೆಲ್ಲಾ ಸಮಾನರೆ. ಸಾವಿನಲ್ಲಿ ತಾರತಮ್ಯ ಮಾಡಬಾರದು ಎಂದಿದ್ದಾರೆ.

ಎಲ್ಲರಿಗೂ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಕೋರುತ್ತೇನೆ. ಹತ್ಯೆಯಾದ ಯಾವುದೇ ವ್ಯಕ್ತಿಗೆ ಹಣದ ಮೂಲಕ ಪರಿಹಾರ ನೀಡುವುದು ಪರ್ಯಾಯವಲ್ಲ. ಹಣಕ್ಕೆ ಮತ್ತು ಜೀವಕ್ಕೆ ತುಲನೆ ಮಾಡಲು ಬರುವುದಿಲ್ಲ. ಕುಟುಂಬದವರಿಗೆ ತೊಂದರೆಯಾಗಬಾರದೆಂದು ಸಹಾಯ ಮಾಡುತ್ತಾರೆ. ಆದರೆ ಆಯಾ ರಾಜ್ಯ ಸರ್ಕಾರಗಳು ಪ್ರಾಣ ಕಳೆದುಕೊಂಡ ಎಲ್ಲರಿಗೂ ಪರಿಹಾರ ನೀಡಬೇಕು. ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡಬಾರದು ಎಂದಿದ್ದಾರೆ.

ಯಾವುದೇ ಸಮುದಾಯದವರು ಇತರ ಸಮುದಾಯದ ಮೇಲೆ ಆಕ್ರಮಣ, ಬೆದರಿಕೆ, ದಬ್ಬಾಳಿಕೆ ಮಾಡಬಾರದು. ಯಾವುದೇ ಸಮುದಾಯದವರು ಮಾಡಿದರೂ ಶಾಂತಿಯುತವಾಗಿ ತೀವ್ರವಾಗಿ ವಿರೋಧಿಸುತ್ತೇವೆ. ಭದ್ರತೆ, ಶಾಂತಿ, ನೆಮ್ಮದಿ ದೇಶದ ಉದ್ದೇಶ. ಯಾವುದೇ ಸಮುದಾಯದವರ ಮೇಲೂ ದಬ್ಬಾಳಿಕೆಯಾಗಬಾರದು. ಯಾರ ಮೇಲೂ ದಬ್ಬಾಳಿಕೆಯಾಗದಂತೆ ಸರ್ಕಾರ ಗಮನಿಸಬೇಕು ಎಂದು ಮಂತ್ರಾಲಯ ಶ್ರೀಗಳು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!