Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್ ಧರಿಸಲು ಅವಕಾಶ ಕೊಟ್ಟರೆ, ನಮ್ಮ ಹುಡುಗರು ಕೇಸರಿ ಶಾಲು, ಟೋಪಿ ಧರಿಸುತ್ತಾರೆ : ರೇಣುಕಾಚಾರ್ಯ

Facebook
Twitter
Telegram
WhatsApp

ದಾವಣಗೆರೆ: ರಾಜ್ಯ ಸರ್ಕಾರದ ಹಿಜಾಬ್ ನಿಷೇಧವನ್ನು ವಾಪಸ್ ಪಡೆಯುವ ಹೇಳಿಕೆಗೆ ಇದೀಗ ಎಂ ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಅವರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ನಮ್ಮ ಹುಡುಗರು ಕೇಸರಿ ಶಾಲು, ಟೋಪಿ ಧರಿಸಿ ಬರುತ್ತಾರೆ ಎಂದೇ ಹೇಳಿದ್ದಾರೆ.

ಕರ್ನಾಟಕದಲ್ಲಿ ಟಿಪ್ಪು, ತುಘಲಕ್ ಸರ್ಕಾರವಿದೆ. ಅನುಭವಿ ಸಿದ್ದರಾಮಯ್ಯ ಅವರು ಹಿಜಾಬ್ ನಿಷೇಧ ಮಾಡಿರುವ ಆದೇಶವನ್ನು ಹಿಂಪಡೆಯುತ್ತೇವೆ ಎಂದಿದ್ದಾರೆ. ಒಂದು ವರ್ಗವನ್ನು ಒಲೈಸಲು ಈ ರೀತಿ ಮಾಡುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕೋಮು ಗಲಭೆಗಳು ನಡೆಯುತ್ತವೆ ಎಂದಿದ್ದಾರೆ.

 

ಹಿಜಾಬ್ ಧರಿಸಲು ಅವರಿಗೆ ಅವಕಾಶ ನೀಡಿದರೆ ಕೇಸರಿ ಶಾಲು ಹಾಗೂ ಟೋಪಿ ಧರಿಸಲು ನಮಗೂ ಅವಕಾಶ ನೀಡಬೇಕು. ಬಟ್ಟೆ, ಊಟ ನಮ್ಮ ಹಕ್ಕು ಆದರೆ, ಶಾಲಾ – ಕಾಲೇಜುಗಳಲ್ಲಿ ಸಮವಸ್ತ್ರ ಇರಬೇಕು. ನಮ್ಮ ಹುಡುಗರಿಗೆ ಕೇಸರಿ ಶಾಲು ಧರಿಸಿ ಬರುವುದಕ್ಕೆ ನಾನೇ ಹೇಳುತ್ತೀನಿ. ನಮ್ಮ ಸರ್ಕಾರ ಹಿಜಾಬ್ ಧರಿಸುವುದನ್ನು ನಿಷೇಧ ಮಾಡಿತ್ತು. ಇದನ್ನು ಪ್ರಶ್ನಿಸಿ ಕೋರ್ಟ್ ಗೂ ಹೋಗಿದ್ದರು.

ನೀವೂ ಒಂದು ವರ್ಗದ ಮುಖ್ಯಮಂತ್ರಿ ಅಲ್ಲ. ಹಿಜಾಬ್ ಆದೇಶ ವಾಪಸ್ ಪಡೆದು ಸಂಘರ್ಷಗಳಾದರೆ ಅದಕ್ಕೆ ನೇರ ಹೊಣೆ ಮುಖ್ಯಮಂತ್ರಿಗಳೇ ಆಗುತ್ತಾರೆ. ರಾಜ್ಯದಲ್ಲಿ ಕೋಮು ಗಲಭೆಯಾದರೆ ಅದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ. ಭೀಕರ ಬರಗಾಲದ ವುಚಾರವನ್ನು ಮರೆಮಾಚುವುದಕ್ಕೆ ರಾಜ್ಯ ಸರ್ಕಾರ ಇದೀಗ ಹಿಜಾಬ್ ವಿಚಾರವನ್ನು ಚಾಲ್ತಿಗೆ ತಂದಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ರೇಣುಕಾಚಾರ್ಯ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!