ನಮ್ಮ ಅಭ್ಯರ್ಥಿಯನ್ನು ಹೊತ್ತುಕೊಂಡು ಹೋದರೆ ನಾವು ಸುಮ್ಮನಿರಬೇಕಾ: ಹೆಚ್ ಡಿ ದೇವೇಗೌಡ

suddionenews
1 Min Read

ಬೆಂಗಳೂರು: ನಮ್ಮ ಅಭ್ಯರ್ಥಿಯನ್ನು ಹೊತ್ತುಕೊಂಡು ಹೋದರೆ ನಾವು ಸುಮ್ಮನಿರಬೇಕಾ ಹೀಗಾಗಿ ನಾವು ನಮ್ಮ ಅಭ್ಯರ್ಥಿ ಹಾಕಿದ್ದೇವೆ ಬಿಜೆಪಿ ಗೆಲ್ಲಿಸಲು ಮುಸ್ಲಿಂ ಅಭ್ಯರ್ಥಿ ಹಾಕಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸ್ಲಿಂರನ್ನು ನೀವು ಗುತ್ತಿಗೆ ಪಡೆದಿಲ್ಲ ನಾನು ಬೆಳಸಿದ್ದ ಮುಸ್ಲಿಂ ಮುಖಂಡ ಈಗ ಅವರ ಬಲಗೈ ಶಕ್ತಿ ಕೊಟ್ಟವರು ಎಂದರು.

ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇರಬೇಕು ನಾನು ಆರ್‌ಎಸ್‌ಎಸ್ ಬಗ್ಗೆ ಹೊಗಳಿದ್ದೇನೆ ಎನ್ನುವುದು ಅಪ್ಪಟ ಸುಳ್ಳು ,ಆಡ್ವಾಣಿ‌ ಬಂದಾಗ ನಾವು ಸಮಾಲೋಚನೆ ಮಾಡಿದ್ದೆವು , ಎಮರ್ಜೆನ್ಸಿ ಸಮಯದಲ್ಲಿ ಜೈಲಿಗೆ ಹೋಗಿದ್ದರ ಬಗ್ಗೆ ಮಾತನಾಡಿದ್ದೆವು.
ಬಾಂಕ್ವೆಟ್‌ ಹಾಲ್‌ನಲ್ಲಿ ಒಂದು ಕಾರ್ಯಕ್ರಮ‌ ನಡೆದಿತ್ತು
ನಾನೇ ಬಾಂಕ್ವಟ್ ಹಾಲ್ ಅನುಮತಿ ನೀಡಿದ್ದೆ. ನನ್ನ ಅಧ್ಯಕ್ಷತೆಯಲ್ಲಿಯೇ ಕಾರ್ಯಕ್ರಮ ನಡೆದಿತ್ತು.
ನಾನು ಆ ಸಭೆಯಲ್ಲೇ ಹೇಳಿದ್ದೆ, ಸಭೆಯನ್ನು ದುರುಪಯೋಗ ಮಾಡುವುದು ಸರಿಯಲ್ಲ ಎಂದಿದ್ದೆ. ನಾವು ತುರ್ತುಪರಿಸ್ಥಿತಿಗೆ ಬೆಂಬಲಿಸುತ್ತೇವೆ ಎಂದು ಹೇಳಿ ಅನೇಕರು ಬರೆದುಕೊಟ್ಟರು
ನನಗೂ ಆರ್ಎಸ್ಎಸ್ ಗೂ ಏನ್ ಸಂಬಂಧ ಇದೆ.ಆರ್ಎಸ್ಎಸ್ ಬಗ್ಗೆ ನನಗೆ ಗಂಧ ಗಾಳಿ ಗೊತ್ತಿಲ್ಲ ಸುಮ್ಮನೆ ಸುಳ್ಳು ಹೇಳುವುದನ್ನು ಬಿಡಬೇಕು

ಕಾಂಗ್ರೆಸ್ ಸ್ಥಿತಿ ಎಲ್ಲಿಂದ ಎಲ್ಲಿಗೆ ಬರ್ತಾ ಇದೆ ಅಂತ ಗೊತ್ತಿದ್ದೆ
ನೆಹರು ಅವರ ನಂತರ ಕಾಲದಿಂದ ಕಾಲಕ್ಕೆ ಯಾವ ಯಾವ ರಾಜ್ಯದಲ್ಲಿ ಎಲ್ಲಿಗೆ ಬಂದಿದೆ ಅಂತ ಎಲ್ಲರಿಗೂ ಗೊತ್ತಿದೆ. ನನ್ನನ್ನು ಕೆಣಕಲು ಹೋಗಬೇಡಿ ಕೆಣಕಿದರೆ ಸರಿ‌ ಇರಲ್ಲ ಎಂದು ಮಾಜಿ ಪ್ರಧಾನಿ ದೇವೆಗೌಡ ಅವರು ಗುಡುಗಿದರು.

Share This Article
Leave a Comment

Leave a Reply

Your email address will not be published. Required fields are marked *