Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದಿಂದ ಬೆಳೆ ಹಾನಿಗೆ ಪರಿಹಾರ ಬಂದೆ ಬರುತ್ತದೆ : ತಹಶೀಲ್ದಾರ್ ಎನ್. ರಘುಮೂರ್ತಿ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ನ.18): ಬೆಳೆ ನಷ್ಟವಾಗಿದೆ ಎಂದು ರೈತರ ಬಾಯಲ್ಲಿ ಆತ್ಮಹತ್ಯೆ ಮಾತು ಬರಬಾರದು ಸರ್ಕಾರದಿಂದ ಬೆಳೆ ಹಾನಿಗೆ ಪರಿಹಾರ ಬಂದೆ ಬರುತ್ತದೆ. ನಾವು ಬೆಳೆ ನಷ್ಟದ ವರದಿ ಕಳಸುತ್ತೇವೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ರೈತರಿಗೆ ಸಂತ್ವಾನ ಹೇಳಿದರು.

ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಸಮೀಪ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯೊಂದಿಗೆ ನಷ್ಟವಾದ ಶೇಂಗಾ ಬೆಳೆ ಸಮೀಕ್ಷೆ ನಡೆಸಿ ಅವರು ಮಾತನಾಡಿದರು.

ತಾಲ್ಲೂಕಿನಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆಯಾದರೂ ಸಮಯಕ್ಕೆ ಸರಿಯಾಗಿ ಬಾರದೆ ರೈತರ ಬೆಳೆ ನಷ್ಟವಾಗಿದ್ದರೆ, ಇನ್ನು ಕಳೆದ 12 ದಿನಗಳಿಂದ  ಸುರಿದ ಮಳೆಗೆ ಶೇಂಗಾ ಬಳ್ಳಿಗಳಿಗೆ ಬೂದಿ ರೋಗ ಬಿದ್ದು ಶೇಂಗಾ ಬಳ್ಳಿಗಳು ಕಟಾವು ಮಾಡಲು ಬಾರದಂತೆ ನೆಲದಲ್ಲಿಯೇ ಶೇಂಗಾ ಕಾಯಿಗಳು ನೆಲದಲ್ಲಿಯೇ ಉದುರಿ ಹೋಗಿವೆ. ಇನ್ನು ಬಳ್ಳಿಯು ಸಂಪೂರ್ಣ ವಾಗಿ ಕೊಳೆತು ಹೋಗಿದ್ದು ರೈತರ ನಷ್ಟದಲ್ಲಿ ಇದ್ದಾರೆ ಎಂದು ಮಾಹಿತಿ‌ನೀಡಿದರು.

ತಾಲ್ಲೂಕಿನಲ್ಲಿ ಶೇಂಗಾ ಬೆಳೆಯು 56 ಸಾವಿರ ಹೆಕ್ಟರ್ ಪ್ರದೇಶ ನಷ್ಟವಾಗಿದೆ ಎಂದು ಅಂದಾಜಿ ಸಲಾಗಿದೆ. ಇನ್ನು ಈರುಳ್ಳಿ 8600 ಸಾವಿರ ಹೆಕ್ಟರ್ ಪ್ರದೇಶದಲ್ಲಿ ನಾಶವಾಗಿದೆ. ಇನ್ನು ಮೂರು ದಿನ ರೈತರ  ಬೆಳೆಗಳ ಹಾನಿ ಕುರಿತು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಈ ವೇಳೆ ಕೃಷಿ ಸಹಾಯಕ ನಿರ್ದೇಶಕ ಆಶೋಕ್, ರೈತ ಮುಖಂಡ  ಕೆ.ಪಿ.ಭೂತಯ್ಯ, ಕೃಷಿ ಇಲಾಖೆ, ತೋಟಗಾರಿಕೆ  ಸಿಬ್ಬಂದಿಗಳು ಹಾಗೂ ರೈತರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!