Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವೇಗೌಡ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ವೋ, ಕಾನೂನು ಹೋರಾಟ ಮಾಡ್ತೇನೆ : ಸಿ ಎಂ ಇಬ್ರಾಹಿಂ

---Advertisement---

ಬೆಂಗಳೂರು: ಇತ್ತಿಚೆಗಷ್ಟೇ ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್ ನಿಂದ ಅಮಾನತು ಮಾಡಿದ್ದಾರೆ. ಈ ಸಂಬಂಧ ಇದೀಗ ಇಬ್ರಾಹಿಂ ಅವರು ಗರಂ ಆಗಿದ್ದು, ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.

ಹೆಚ್ ಡಿ ದೇವೇಗೌಡ ಅವರು ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ, ಇಲ್ಲವೋ ಎಂಬುದೇ ಅನುಮಾನವಿದೆ. ಈ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿ ನಿರ್ಧಾರ ಮಾಡಲಿದೆ. ನಾನೂ ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ. ಮಗನಿಗಾಗಿ ಈ ಥರ ಮಾಡುವುದು ಸರಿಯಲ್ಲ. ನಿರ್ಣಯವನ್ನು ವಾಪಾಸ್ ಪಡೆಯಿರಿ ಎಂದು ಈಗಲೂ ಮನವಿ ಮಾಡುತ್ತೇವೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮಾಡಿ, ದೇವೇಗೌಡರನ್ನು ರಾಷ್ಟ್ರೀಯ ತೆಗೆದು ಹಾಕಿದರೆ ಏನು ಮಾಡುತ್ತೀರಿ..?ಅಮಾನತು ಮಾಡುವ ಬಗ್ಗೆ ನನಗೆ ನೋಟೀಸ್ ಕೊಟ್ಟಿಲ್ಲ. ನಾನೇನು ಅವರ ಮನೆ ಕೆಲಸದವನಾ..? ಏನು ಇವರ ಹುಚ್ಚಾಟ. ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.

ಅಮಾನತು ಮಾಡಲು ನನಗೇನು ನೋಟೀಸ್ ಕೊಟ್ಟಿದ್ದಾರಾ..? ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ಮೊದಲ ತಪ್ಪು. ಎಲ್ಲೋ ರೆಸಾರ್ಟ್ ನಲ್ಲಿ 8 ರಿಂದ 10 ಜನ ಸಭೆ ಮಾಡುವುದಲ್ಲ. ನ್ಯಾಷನಲ್ ಕೌನ್ಸಿಲ್ ಮೆಂಬರ್ ನಲ್ಲಿ ಇವರ ಮನೆಯವರೇ 26 ಜನ ಇದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಿ ಎಂ ಇಬ್ರಾಹಿಂ ಅವರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿರೋಧಿಸಿ ಹೇಳಿಕೆಗಳನ್ನು ನೀಡುತ್ತಿದ್ದರು. ಒರಿಜಿನಲ್ ಜೆಡಿಎಸ್ ನಮ್ಮದೆ. ಕುಮಾರಸ್ವಾಮಿ ಅವರನ್ನೇ ಅಮಾನತು ಮಾಡುತ್ತೇವೆ ಎಂಬ ಮಾತುಗಳನ್ನು ಆಡಿದ್ದರು. ಇಬ್ರಾಹಿಂ ಅವರನ್ನೇ ಅಮಾನತು ಮಾಡಿ ದೇವೇಗೌಡರು ಶಾಕ್ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment