Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವೇಗೌಡ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ವೋ, ಕಾನೂನು ಹೋರಾಟ ಮಾಡ್ತೇನೆ : ಸಿ ಎಂ ಇಬ್ರಾಹಿಂ

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗಷ್ಟೇ ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್ ನಿಂದ ಅಮಾನತು ಮಾಡಿದ್ದಾರೆ. ಈ ಸಂಬಂಧ ಇದೀಗ ಇಬ್ರಾಹಿಂ ಅವರು ಗರಂ ಆಗಿದ್ದು, ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.

ಹೆಚ್ ಡಿ ದೇವೇಗೌಡ ಅವರು ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ, ಇಲ್ಲವೋ ಎಂಬುದೇ ಅನುಮಾನವಿದೆ. ಈ ಬಗ್ಗೆ ರಾಷ್ಟ್ರೀಯ ಕಾರ್ಯಕಾರಿಣಿ ನಿರ್ಧಾರ ಮಾಡಲಿದೆ. ನಾನೂ ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ. ಮಗನಿಗಾಗಿ ಈ ಥರ ಮಾಡುವುದು ಸರಿಯಲ್ಲ. ನಿರ್ಣಯವನ್ನು ವಾಪಾಸ್ ಪಡೆಯಿರಿ ಎಂದು ಈಗಲೂ ಮನವಿ ಮಾಡುತ್ತೇವೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮಾಡಿ, ದೇವೇಗೌಡರನ್ನು ರಾಷ್ಟ್ರೀಯ ತೆಗೆದು ಹಾಕಿದರೆ ಏನು ಮಾಡುತ್ತೀರಿ..?ಅಮಾನತು ಮಾಡುವ ಬಗ್ಗೆ ನನಗೆ ನೋಟೀಸ್ ಕೊಟ್ಟಿಲ್ಲ. ನಾನೇನು ಅವರ ಮನೆ ಕೆಲಸದವನಾ..? ಏನು ಇವರ ಹುಚ್ಚಾಟ. ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.

ಅಮಾನತು ಮಾಡಲು ನನಗೇನು ನೋಟೀಸ್ ಕೊಟ್ಟಿದ್ದಾರಾ..? ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ಮೊದಲ ತಪ್ಪು. ಎಲ್ಲೋ ರೆಸಾರ್ಟ್ ನಲ್ಲಿ 8 ರಿಂದ 10 ಜನ ಸಭೆ ಮಾಡುವುದಲ್ಲ. ನ್ಯಾಷನಲ್ ಕೌನ್ಸಿಲ್ ಮೆಂಬರ್ ನಲ್ಲಿ ಇವರ ಮನೆಯವರೇ 26 ಜನ ಇದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಿ ಎಂ ಇಬ್ರಾಹಿಂ ಅವರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿರೋಧಿಸಿ ಹೇಳಿಕೆಗಳನ್ನು ನೀಡುತ್ತಿದ್ದರು. ಒರಿಜಿನಲ್ ಜೆಡಿಎಸ್ ನಮ್ಮದೆ. ಕುಮಾರಸ್ವಾಮಿ ಅವರನ್ನೇ ಅಮಾನತು ಮಾಡುತ್ತೇವೆ ಎಂಬ ಮಾತುಗಳನ್ನು ಆಡಿದ್ದರು. ಇಬ್ರಾಹಿಂ ಅವರನ್ನೇ ಅಮಾನತು ಮಾಡಿ ದೇವೇಗೌಡರು ಶಾಕ್ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬಬ್ಬೂರಿನಲ್ಲಿ ಸರಣಿ ಕಳ್ಳತನ

ಸುದ್ದಿಒನ್, ಹಿರಿಯೂರು, ಡಿಸೆಂಬರ್.11 : ತಾಲೂಕಿನ ಬಬ್ಬೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಗ್ರಾಮದ ಮೂರು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಗ್ರಾಮದ  ಅಭಿನಂದನ್, ಶ್ರೀರಂಗ ಬೇಕರಿ ಪುನೀತ್, ಹನುಮಂತಪ್ಪ ಅವರಿಗೆ

ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ

  370 ನೇ ವಿಧಿ ಕುರಿತು SC ತೀರ್ಪು : 370 ನೇ ವಿಧಿಯನ್ನು ರದ್ದುಗೊಳಿಸುವುದು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್

370 ನೇ ವಿಧಿ : ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು :  ಕಾಶ್ಮೀರದಲ್ಲಿ ಬಿಗಿ ಭದ್ರತೆ

  ಸುದ್ದಿಒನ್ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ 370 ನೇ ವಿಧಿಯನ್ನು ರದ್ದುಗೊಳಿಸಿ 4 ವರ್ಷಗಳು ಕಳೆದಿವೆ. ಆದರೆ, 370ನೇ ವಿಧಿ ರದ್ದತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು

error: Content is protected !!