Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

30 ದಿನದೊಳಗೆ ವಿದ್ಯುತ್ ಬಿಲ್‌ ಕಟ್ಟದಿದ್ದರೆ ಸಂಪರ್ಕ ಕಡಿತ : ಬೆಸ್ಕಾಂ ಸೂಚನೆ

---Advertisement---

ಬೆಂಗಳೂರು, ಆಗಸ್ಟ್‌ 30 : ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು.

ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ.

ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಮಾಪನ ಮಾಡಿದ ಬಳಿಕ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.

ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.

ಗ್ರಾಹಕರಿಗೆ ವಿಶೇಷ ಸೂಚನೆ :
ಆನ್‌ಲೈನ್ ಮೂಲಕ ವಿದ್ಯುತ್‌ ಬಿಲ್‌ ಪಾವತಿಸಿದ ಸಂದರ್ಭದಲ್ಲಿ ಕೆಲವೊಮ್ಮೆ ಬೆಸ್ಕಾಂ ಸಾಫ್ಟ್‌ವೇರ್‌ನಲ್ಲಿ ವಿವರ ನಮೂದಾಗದೇ ಇದ್ದಾಗ, ಬಾಕಿ ತೋರಿಸುವ ಸಾಧ್ಯತೆ ಇರುತ್ತದೆ. ಇಂಥ ಸಂದರ್ಭದಲ್ಲಿ ವಿದ್ಯುತ್‌ ಕಡಿತಕ್ಕೆ ಮುಂದಾದರೆ, ಸಿಬ್ಬಂದಿಗೆ ಬಿಲ್‌ ರಸೀದಿ ತೋರಿಸುವುದರಿಂದ ವಿದ್ಯುತ್‌ ಕಡಿತ ಮಾಡಲಾಗುವುದಿಲ್ಲ. ಹಾಗಾಗಿ, ನಮ್ಮ ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಕೋರಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment