Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾದಲ್ಲಿ ನಿವೇಶನ ಸಿಕ್ಕಿದ್ದರೆ ಅದನ್ನೆ ಅಪಪ್ರಚಾರ ಮಾಡುತ್ತಿದ್ದರು : ಕುಮಾರಸ್ವಾಮಿ

---Advertisement---

ಮೈಸೂರು: ಮೂಡಾ ಹಗರಣದ ವುಚಾರ ಈಗಲೂ ಚರ್ಚೆಯಾಗುತ್ತಲೇ ಇದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೂ ಕೂಡ ಮೂಡಾ ನಿವೇಶನ ಹಂಚಿಕೆಯಾಗಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಅದರ ಬೆನ್ನಲ್ಲೇ ಈಗ ಕುಮಾರಸ್ವಾಮಿ ಅವರು ಕ್ಲಾರಿಫಿಕೇಷನ್ ನೀಡಿದ್ದು, ಮೂಡಾದಿಂದ ನಾನು ಯಾವುದೇ ನಿವೇಶನ ಪಡೆದಿಲ್ಲ. ನಿವೇಶನ ಸಿಗದೆ ಇರುವುದೇ ನನ್ನ ಅದೃಷ್ಟ ಎಂದಿದ್ದಾರೆ.

ಒಂದು ವೇಳೆ ನಿವೇಶನ ಮಂಜುರಾಗಿದ್ದಾರೆ ಅದನ್ನೇ ಅಪಪ್ರಚಾರ ಮಾಡಿ ಬಿಡುತ್ತಿದ್ದರು. 1984ರಲ್ಲಿ ಮೂಡಾದಲ್ಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದೇನೆ. 37 ಸಾವಿರ ಹಣವನ್ನು ಕಟ್ಟಿದ್ದೇನೆ. 2006ರಲ್ಲಿ ನಾನು ಸಿಎಂ ಆಗಿದ್ದಾಗ ಯಾರಿಗಾದರೂ ಹೇಳಿದ್ದರೆ ಮನೆಗೆ ಫೈಲ್ ತಂದು ಕೊಡುತ್ತಿದ್ದರು. ಆದರೆ ಆಗಲೂ ಪ್ರಭಾವ ಬಳಸಿ ನಾನು ನಿವೇಶನ ಪಡೆಯಲಿಲ್ಲ. ಮೂಡಾದಲ್ಲಿ ನಿವೇಶನ ಸಿಗದೆ‌ ಇರುವುದೇ ನನ್ನ ಅದೃಷ್ಟ ಎಂದುಕೊಳ್ಳುತ್ತೇನೆ. ಒಂದು ವೇಳೆ ನಿವೇಶನ ಮಂಜೂರಾಗಿದ್ದರೆ ಅದನ್ನೇ ದೊಡ್ಡದು ಮಾಡುತ್ತಿದ್ದರು. ಆದರೂ ಕಾಂಗ್ರೆಸ್ ನವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.

ಮೂಡಾ ಹಗರಣದಿಂದ ಪಾರಾಗುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದಾರೆ. ದೇಸಾಯಿ ಆಯೋಗ್ ವರದಿಯನ್ನು ತಗೊಂಡು ನೆಕ್ಕಲು ಆಗುತ್ತದಾ..? ಪ್ರಕರಣದಿಂದ ಬಚಾವು ಆಗುವುದಕ್ಕೇನೆ ದೇಸಾಯಿ ಆಯೋಗ ನೇಮಕ ಮಾಡಿರುವುದು. ಈ ಸರ್ಕಾರ ಹಾಗೂ ಸಿದ್ದರಾಮಯ್ಯ ಒಂದು ಕ್ಷಣ ಮುಂದುವರೆಯಬಾರದು ಎಂಬುದೇ ನನ್ನ ಆಶಯ. ಸಿದ್ದರಾಮಯ್ಯ ಅವರ ಪತ್ನಿ ಐವತ್ತಲ್ಲ ನೂರು ನಿವೇಶನ ಪಡೆದುಕೊಳ್ಳಲಿ, ನಮ್ಮದೇನು ಅಭ್ಯಂತರವಿಲ್ಲ. ಆದರೆ ಕಾನೂನಹ ಬದ್ಧವಾಗಿ ಪಡೆದುಕೊಳ್ಳಬೇಕು ಎಂಬುದು ನಮ್ಮ ವಾದ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...