ಮೈಸೂರು: ಮೂಡಾ ಹಗರಣದ ವುಚಾರ ಈಗಲೂ ಚರ್ಚೆಯಾಗುತ್ತಲೇ ಇದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೂ ಕೂಡ ಮೂಡಾ ನಿವೇಶನ ಹಂಚಿಕೆಯಾಗಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಅದರ ಬೆನ್ನಲ್ಲೇ ಈಗ ಕುಮಾರಸ್ವಾಮಿ ಅವರು ಕ್ಲಾರಿಫಿಕೇಷನ್ ನೀಡಿದ್ದು, ಮೂಡಾದಿಂದ ನಾನು ಯಾವುದೇ ನಿವೇಶನ ಪಡೆದಿಲ್ಲ. ನಿವೇಶನ ಸಿಗದೆ ಇರುವುದೇ ನನ್ನ ಅದೃಷ್ಟ ಎಂದಿದ್ದಾರೆ.
ಒಂದು ವೇಳೆ ನಿವೇಶನ ಮಂಜುರಾಗಿದ್ದಾರೆ ಅದನ್ನೇ ಅಪಪ್ರಚಾರ ಮಾಡಿ ಬಿಡುತ್ತಿದ್ದರು. 1984ರಲ್ಲಿ ಮೂಡಾದಲ್ಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದೇನೆ. 37 ಸಾವಿರ ಹಣವನ್ನು ಕಟ್ಟಿದ್ದೇನೆ. 2006ರಲ್ಲಿ ನಾನು ಸಿಎಂ ಆಗಿದ್ದಾಗ ಯಾರಿಗಾದರೂ ಹೇಳಿದ್ದರೆ ಮನೆಗೆ ಫೈಲ್ ತಂದು ಕೊಡುತ್ತಿದ್ದರು. ಆದರೆ ಆಗಲೂ ಪ್ರಭಾವ ಬಳಸಿ ನಾನು ನಿವೇಶನ ಪಡೆಯಲಿಲ್ಲ. ಮೂಡಾದಲ್ಲಿ ನಿವೇಶನ ಸಿಗದೆ ಇರುವುದೇ ನನ್ನ ಅದೃಷ್ಟ ಎಂದುಕೊಳ್ಳುತ್ತೇನೆ. ಒಂದು ವೇಳೆ ನಿವೇಶನ ಮಂಜೂರಾಗಿದ್ದರೆ ಅದನ್ನೇ ದೊಡ್ಡದು ಮಾಡುತ್ತಿದ್ದರು. ಆದರೂ ಕಾಂಗ್ರೆಸ್ ನವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.
ಮೂಡಾ ಹಗರಣದಿಂದ ಪಾರಾಗುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದಾರೆ. ದೇಸಾಯಿ ಆಯೋಗ್ ವರದಿಯನ್ನು ತಗೊಂಡು ನೆಕ್ಕಲು ಆಗುತ್ತದಾ..? ಪ್ರಕರಣದಿಂದ ಬಚಾವು ಆಗುವುದಕ್ಕೇನೆ ದೇಸಾಯಿ ಆಯೋಗ ನೇಮಕ ಮಾಡಿರುವುದು. ಈ ಸರ್ಕಾರ ಹಾಗೂ ಸಿದ್ದರಾಮಯ್ಯ ಒಂದು ಕ್ಷಣ ಮುಂದುವರೆಯಬಾರದು ಎಂಬುದೇ ನನ್ನ ಆಶಯ. ಸಿದ್ದರಾಮಯ್ಯ ಅವರ ಪತ್ನಿ ಐವತ್ತಲ್ಲ ನೂರು ನಿವೇಶನ ಪಡೆದುಕೊಳ್ಳಲಿ, ನಮ್ಮದೇನು ಅಭ್ಯಂತರವಿಲ್ಲ. ಆದರೆ ಕಾನೂನಹ ಬದ್ಧವಾಗಿ ಪಡೆದುಕೊಳ್ಳಬೇಕು ಎಂಬುದು ನಮ್ಮ ವಾದ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















