Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೃಷಿ ಖಾತೆ ಸಿಕ್ಕರೆ ರೈತರಿಗಾಗಿ ಕೆಲಸ ಮಾಡುತ್ತೇನೆ : ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಪಕ್ಷ ಸರಳ ಮತ ಪಡೆದು ಅಧಿಕಾರ ಹಿಡಿಯುವತ್ತ ಸಿದ್ಧವಾಗಿದೆ. ಇಂದು ನರೇಂದ್ರ ಮೋದಿಯವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಮೂರನೇ ಬಾರಿಗೆ ಪಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದಿಂದ ಗೆದ್ದಂತ ಸಂಸದರು ಕೂಡ ತೆರಳುತ್ತಿದ್ದಾರೆ.

ರಾಜ್ಯದ ಸಂಸದರಿಗೂ ಕೇಂದ್ರದಲ್ಲಿ ಸಚುವ ಸ್ಥಾನ ಸಿಗುವ ಆಶ್ವಾಸನೆ ಇದೆ. ಡಾ.ಮಂಜುನಾಥ್ ಅವರು ಮೊದಲ ಬಾರಿಗೆ ಅದರಲ್ಲೂ ಕನಕಪುರ ಬಂಡೆ ಎಂದೇ ಕರೆಯುವ ಡಿ.ಕೆ‌. ಸುರೇಶ್ ಅವರನ್ನೇ ಸೋಲಿಸಿದ್ದಾರೆ. ಹೀಗಾಗಿ ಅವರಿಗೂ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಕೈ ಜೋಡಿಸಿದಾಗಲೇ ಕುಮಾರಸ್ವಾಮಿ ಅವರಿಗೆ ಕೇಂದ್ರದಿಂದ ಸ್ಥಾನ ಸಿಗುವ ಸಾಧ್ಯತೆ ಇದೆ‌ ಎಂದೇ ಹೇಳಲಾಗಿತ್ತು. ಅದರಂತೆ ಕುಮಾರಸ್ವಾಮಿ ಅವರು ಗೆದ್ದಿದ್ದಾರೆ. ಈಗ ಕೇಂದ್ರದಿಂದ ಸಚಿವರಾಗುವ ಎಲ್ಲಾ ಸಾಧ್ಯತೆಯೂ ಇದೆ.

ಈ ಬಗ್ಗೆ‌ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ನಮ್ಮ ಈ ಗೆಲುವು ಕರ್ನಾಟಕ ಜನತೆಗೆ ಸಲ್ಲಬೇಕು. ನರೇಂದ್ರ ಮೋದಿ ಜೊತೆಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಮೋದಿಯವರ ನಂಬಿಕೆ ಉಳಿಸುವ ಕೆಲಸ ಮಾಡುತ್ತೇನೆ. ನನಗೆ ಮಂತ್ರಿ ಸ್ಥಾನ ಸಿಕ್ಕರೆ ಖಂಡಿತ ಜನರಿಗಾಗಿ ಕೆಲಸ ಮಾಡುತ್ತೇನೆ. ಕೃಷಿ ಖಾತೆ ಸಿಕ್ಕರೆ ಸಂತೋಷ. ಈ ಮೂಲಕ ರೈತರಿಗಾಗಿ ಕೆಲಸ ಮಾಡುವ ಅವಕಾಶ ಸಿಗುತ್ತದೆ. ರಾಜ್ಯದಲ್ಲಿ ಜೆಡಿಎಸ್ ಪುನಶ್ಚೇತನ ಸಿಕ್ಕಿದೆ. ಮೋದಿ ನೇತೃತ್ವದ ಸರ್ಕಾರ, ಕನ್ನಡಿಗರಿಂದ ಪುನಶ್ಚೇತನ ಸಿಕ್ಕಿದೆ. ವಿಶೇಷವಾಗಿ ನನ್ನ ಮಂಡ್ಯ ಜನರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ಅಕ್ರಮ : ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಏನಂದ್ರು..?

ಬೆಂಗಳೂರು: ಮೂಡಾದಿಂದ ಹದಿನೈದು ಸೈಟುಗಳು ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರ ಹೆಸರಲ್ಲಿ ಇದೆ ಎಂಬುದು ತಿಳಿದ ಮೇಲೆ ಪ್ರತಿಪಕ್ಷಗಳು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ

ಯುವ-ಶ್ರೀದೇವಿ ಅರ್ಜಿ ವಿಚಾರಣೆ : ಡಿವೋರ್ಸ್ ಸಿಕ್ತಾ..? ಏನಾಯ್ತು ಕೇಸ್..?

ಬೆಂಗಳೂರು: ದೊಡ್ಮನೆ ಕುಡಿ ಯುವ ರಾಜ್‍ಕುಮಾರ್ ಹಾಗೂ ಸೊಸೆ ಶ್ರೀದೇವಿ ಭೈರಪ್ಪ ಅವರ ಡಿವೋರ್ಸ್ ಕೇಸ್ ಅರ್ಜಿ ಇಂದು ವಿಚಾರಣೆಗೆ ಬಂದಿದೆ. ಫ್ಯಾಮಿಲಿ ಕೋರ್ಟ್ ಗೆ ಇಂದು ಇಬ್ಬರು ಹಾಜರಾಗಿದ್ದರು. ಅರ್ಜಿ ವಿಚಾರಣೆ ನಡೆಸಿದ

ದರ್ಶನ್ ನ್ಯಾಯಾಂಗ ಬಂಧನ ಇಂದು ಅಂತ್ಯ : ದಾಸನ ಪರ ವಕೀಲರ್ಯಾಕೆ ಇನ್ನು ಜಾಮೀನು ಅರ್ಜಿ ಸಲ್ಲಿಸಿಲ್ಲ..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧನವಾಗಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾಗಲಿದೆ. ಹೀಗಾಗಿ ಪೊಲೀಸರು ಇಂದು ಮತ್ತೊಮ್ಮೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ನ್ಯಾಯಾಧೀಸರ ಎದುರು ಹಾಜರು ಪಡಿಸಲಿದ್ದಾರೆ. ವಿಡಿಯೋ

error: Content is protected !!