Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೃಷಿ ಖಾತೆ ಸಿಕ್ಕರೆ ರೈತರಿಗಾಗಿ ಕೆಲಸ ಮಾಡುತ್ತೇನೆ : ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಪಕ್ಷ ಸರಳ ಮತ ಪಡೆದು ಅಧಿಕಾರ ಹಿಡಿಯುವತ್ತ ಸಿದ್ಧವಾಗಿದೆ. ಇಂದು ನರೇಂದ್ರ ಮೋದಿಯವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಮೂರನೇ ಬಾರಿಗೆ ಪಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯದಿಂದ ಗೆದ್ದಂತ ಸಂಸದರು ಕೂಡ ತೆರಳುತ್ತಿದ್ದಾರೆ.

ರಾಜ್ಯದ ಸಂಸದರಿಗೂ ಕೇಂದ್ರದಲ್ಲಿ ಸಚುವ ಸ್ಥಾನ ಸಿಗುವ ಆಶ್ವಾಸನೆ ಇದೆ. ಡಾ.ಮಂಜುನಾಥ್ ಅವರು ಮೊದಲ ಬಾರಿಗೆ ಅದರಲ್ಲೂ ಕನಕಪುರ ಬಂಡೆ ಎಂದೇ ಕರೆಯುವ ಡಿ.ಕೆ‌. ಸುರೇಶ್ ಅವರನ್ನೇ ಸೋಲಿಸಿದ್ದಾರೆ. ಹೀಗಾಗಿ ಅವರಿಗೂ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಕೈ ಜೋಡಿಸಿದಾಗಲೇ ಕುಮಾರಸ್ವಾಮಿ ಅವರಿಗೆ ಕೇಂದ್ರದಿಂದ ಸ್ಥಾನ ಸಿಗುವ ಸಾಧ್ಯತೆ ಇದೆ‌ ಎಂದೇ ಹೇಳಲಾಗಿತ್ತು. ಅದರಂತೆ ಕುಮಾರಸ್ವಾಮಿ ಅವರು ಗೆದ್ದಿದ್ದಾರೆ. ಈಗ ಕೇಂದ್ರದಿಂದ ಸಚಿವರಾಗುವ ಎಲ್ಲಾ ಸಾಧ್ಯತೆಯೂ ಇದೆ.

ಈ ಬಗ್ಗೆ‌ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ನಮ್ಮ ಈ ಗೆಲುವು ಕರ್ನಾಟಕ ಜನತೆಗೆ ಸಲ್ಲಬೇಕು. ನರೇಂದ್ರ ಮೋದಿ ಜೊತೆಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಮೋದಿಯವರ ನಂಬಿಕೆ ಉಳಿಸುವ ಕೆಲಸ ಮಾಡುತ್ತೇನೆ. ನನಗೆ ಮಂತ್ರಿ ಸ್ಥಾನ ಸಿಕ್ಕರೆ ಖಂಡಿತ ಜನರಿಗಾಗಿ ಕೆಲಸ ಮಾಡುತ್ತೇನೆ. ಕೃಷಿ ಖಾತೆ ಸಿಕ್ಕರೆ ಸಂತೋಷ. ಈ ಮೂಲಕ ರೈತರಿಗಾಗಿ ಕೆಲಸ ಮಾಡುವ ಅವಕಾಶ ಸಿಗುತ್ತದೆ. ರಾಜ್ಯದಲ್ಲಿ ಜೆಡಿಎಸ್ ಪುನಶ್ಚೇತನ ಸಿಕ್ಕಿದೆ. ಮೋದಿ ನೇತೃತ್ವದ ಸರ್ಕಾರ, ಕನ್ನಡಿಗರಿಂದ ಪುನಶ್ಚೇತನ ಸಿಕ್ಕಿದೆ. ವಿಶೇಷವಾಗಿ ನನ್ನ ಮಂಡ್ಯ ಜನರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!