ಮಂಡ್ಯ: ಆದಿಚುಂಚನಗಿರಿ ಮಠಕ್ಕೂ ದೇವೇಗೌಡರ ಕುಟಜಂಬಕ್ಕೂ ಎಷ್ಟು ಒಳ್ಳೆಯ ನಂಟು, ಭಕ್ತಿ, ಗೌರವ ಇದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಅದರಲ್ಲೂ ಸ್ವಾಮೀಜಿಗೆ ನನ್ನಿಂದ ಅಪಚಾರವಾಗಿದ್ರೆ ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ ಎಂಬ ಮಾತನ್ನ ಹೇಳಿದ್ದಾರೆ.
ಇಂದು ವಿಸಿ ಫಾರ್ಮ್ ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ಕೂಡ ಭಾಗಿಯಾಗಿದ್ರು. ಸ್ವಾಮೀಜಿ ಮುಂದೆಯೇ ಈ ಕ್ಷಮಾಪ್ಪಣೆಯ ಮಾತನ್ನ ಹೇಳಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು ಬಳಕೆ ಮಾಡಿಕೊಳ್ಳಬಾರದು ಎಂದು ನಾನು ಹೇಳಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರುಗೆ ಗೊತ್ತಿಲ್ಲ.
ಬಾಲಗಂಗಾಧರನಾಥ ಸ್ವಾಮೀಜಿ ಅವರು ಸಮಾಜದ ಗೌರವ ಉಳಿಸುವುದಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿ ಇತ್ತು. ನನ್ನನ್ನು ಕಂಡರು ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರ ಆಗಿದ್ರೆ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆ ನಮ್ಮ ನಿರ್ಮಲಾನಂದ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತನಾಡಿದ್ದಕ್ಕೆ ಇನ್ನ್ಯಾರೋ ಮಾತನಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಶಿಕ್ಷಣ ಹೊಂದಿರುವವರು ದೇಶದ ಇತಿಹಾಸದಲ್ಲು ಮತ್ತೊಬ್ಬರು ಯಾರು ಇಲ್ಲ ಎಂದು ನಿರ್ಮಲಾನಂದನಾಥ ಸ್ವಾಮೀಜಿಯವರ ಗುಣಗಾನ ಮಾಡಿದ್ದಾರೆ. ನೀಡಿದ ಹೇಳಿಕೆಗೂ ಸ್ಪಷ್ಟನೆ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












