Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೀಗೆ ಮಳೆ ಬಂದರೆ 2 ತಿಂಗಳಲ್ಲಿ ವಾಣಿ ವಿಲಾಸ ಜಲಾಶಯ ಕೋಡಿ..!

Facebook
Twitter
Telegram
WhatsApp

ಚಿತ್ರದುರ್ಗ: ಈ ಬಾರಿಯ ಮುಂಗಾರು ಮಳೆ ಜೋರಾಗಿರುವ ಕಾರಣ, ರಾಜ್ಯದೆಲ್ಲೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಇನ್ನು ಚಿತ್ರದುರ್ಗ ಜಿಲ್ಲೆಯ ಏಕೈಕ ರೈತರ ಜೀವನಾಡಿಯಾಗಿರುವ ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯ ಕೂಡ ಕೋಡಿ ಬೀಳುವ ನಿರೀಕ್ಷೆ ಇದೆ. ಯಾಕಂದ್ರೆ ಈಗಾಗಲೇ ನೀರು 120 ಅಡಿ ಮುಟ್ಟುವ ಹಂತಕ್ಕೆ ತಲುಪಿದೆ. 130 ಅಡಿ ನೀರು ಬಂದರೆ ಸಾಕು ಕೋಡಿ ಬೀಳಲಿದೆ. ಪ್ರಸ್ತುತ 117.70 ಅಡಿ ನೀರು ಇದೆ. ಭದ್ರಾ ಜಲಾಶಯದ ಕಾಲುವೆಯಿಂದ ಕೂಡ ಪ್ರತಿದಿನ 700 ಕ್ಯೂಸೆಕದ ನೀರು ಹರಿದು ಬರುತ್ತಿದೆ.

ವಾಣಿ ವಿಲಾಸ ಜಲಾಶಯದ 135 ಅಡಿ ಎತ್ತರವಿದ್ದು, 30 ಟಿಎಂಸಿ ನೀರಿನ ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿದೆ. 130 ಅಡಿಗೆ ಕೋಡಿ ಬೀಳಲಿದೆ. ಸದ್ಯ ಎತ್ತಿನಹೊಳೆಯಿಂದ ಕೂಡ ವಾಣಿ ವಿಲಾಸ ಜಲಾಶಯಕ್ಕೆ ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತಿದೆ. ಈ ಜಲಾಶಯ ಕೋಡಿ ಬಿದ್ದು 89 ವರ್ಷಗಳೇ ಕಳೆದಿತ್ತು. ಆದರೆ 2022ರಲ್ಲಿ ಕೋಡಿ ಬಿದ್ದು ರೈತರ ಮೊಗದಲ್ಲಿ ಸಂತಸ ಮೂಡಿಸಿತ್ತು. 2023ರಲ್ಲಿ ಕೆಲವು ಕಡೆ ಬರದ ಛಾಯೆಯೇ ಇತ್ತು. ಇನ್ನು ಚಿತ್ರದುರ್ಗ ಜಿಲ್ಲೆಯಲ್ಲೂ ಹೇಳಿಕೊಳ್ಳುವಂತೆ ಮಳೆ ಏನು ಆಗಿರಲಿಲ್ಲ.

ಈ ಬಾರಿಯ ಮುಂಗಾರು ಅಬ್ಬರಿಸುತ್ತಲೇ ಇದೆ. ಇನ್ನು ಕೇವಲ 12 ಅಡಿ‌ ನೀರಿ ಬಂದರೆ ಕೋಡಿ ಬೀಳಲಿದೆ. ಅದಕ್ಕಾಗಿ ಇನ್ನೊಂದೆರಡು ತಿಂಗಳು ಇದೇ ಥರ ಮಳೆ ಬೀಳಬೇಕಾಗಿದೆ. ಇನ್ನು ಈ ಜಲಾಶಯವನ್ನು 1907ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನಿರ್ಮಾಣ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ ಸೇರಿದಂತೆ ಸುತ್ತಮುತ್ತಲ ಜನರಿಗೆ ನೀರಿನ ಮೂಲವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!