Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಡ್ಯದಿಂದ ಜೆಡಿಎಸ್ ಸ್ಪರ್ಧಿಸಿದರೆ ಸುಮಲತಾ ಈ ಕ್ಷೇತ್ರ ಆಯ್ಕೆ ಮಾಡಿಕೊಳ್ತಾರಾ..?

---Advertisement---

ಮಂಡ್ಯ : ಚುನಾವಣೆ ಎಂದಾಕ್ಷಣಾ ಮಂಡ್ಯ ಜಿಲ್ಲೆ ಬೇಗನೇ ನೆನಪಾಗುತ್ತದೆ. ಇದೀಗ ಲೋಕಸಭಾ ಚುನಾವಣೆಯ ಕಣವೂ ರಂಗೇರಿದೆ. ಎಲ್ಲರೂ ತಿರುಗಿ ನೋಡುವಂತಿರುವ ಮಂಡ್ಯದಲ್ಲಿ ಒಳ್ಳೆ ಸ್ಪರ್ಧೆ ಇಲ್ಲ ಅಂದರೆ ಹೇಗೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ವರ್ಸಸ್ ನಿಖಿಲ್ ಕುಮಾರಸ್ವಾಮಿ ನಡುವೆ ಒಳ್ಳೆ ಫೈಟ್ ನಡೆದಿತ್ತು. ಆದರೆ ಕಡೆಗೆ ನಿಖಿಲ್ ಸೋತರು, ಸ್ವತಂತ್ರ ಅಭ್ಯರ್ಥಿಯಾಗಿದ್ದ ಸುಮಲತಾ ಗೆದ್ದರು. ಇದೀಗ ಮತ್ತೆ ಅದೇ ಮಂಡ್ಯ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಜೆಡಿಎಸ್ ಪಣ ತೊಟ್ಟಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಅಖಾಡಕ್ಕೆ ಇಳಿಯುತ್ತಿವೆ. ಇದರಿಂದ ಹಲವರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆಯೂ ದಟ್ಟವಾಗಿದೆ. ಮಂಡ್ಯದಲ್ಲಿ ಸುಮಲತಾ ಸ್ವತಂತ್ರವಾಗಿಯೇ ಗೆದ್ದಿದ್ದರು. ಬಿಜೆಪಿಗೆ ಬೇರೆ ಸೇರ್ಪಡೆಯಾಗಿದ್ದಾರೆ. ದಳಪತಿಗಳು ಯಾವುದೇ ಕಾರಣಕ್ಕೂ ಮಂಡ್ಯ ಬಿಟ್ಟು ಕೊಡಲ್ಲ. ಹೀಗಾಗಿ ಸುಮಲತಾ ನಿರ್ಧಾರದ ಕಡೆಗೆ ಎಲ್ಲರ ಚಿತ್ತ ನೆಟ್ಟಿದೆ.

ಮಂಡ್ಯದಲ್ಲಿ ನಿಲ್ಲುತ್ತಾರಾ..? ಸ್ವತಂತ್ರ ಅಭ್ಯರ್ಥಿಯಾಗುತ್ತಾರಾ..?  ಇಲ್ಲವೇ ಬೆಂಗಳೂರು ಉತ್ತರ ಕ್ಷೇತ್ರವನ್ನು ಆಯ್ಕೆ‌ಮಾಡಿಕೊಳ್ಳುತ್ತಾರಾ ಎಂಬ ಕುತೂಹಲ ಸಹಜವಾಗಿಯೇ ಎಲ್ಲರಿಗೂ ಕುತೂಹಲ ಮೂಡಿದೆ. ಮಂಡ್ಯದಿಂದ ಟಿಕೆಟ್ ಸಿಗದೆ ಹೋದಲ್ಲಿ ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಸುಮಲತಾ ಅವರು ಪತಿ ಅಂಬರೀಶ್ ಅವರ ಅಭಿಮಾನಿಗಳಿಗಾಗಿ ಮಂಡ್ಯ ಬಿಡುವುದು ಅನುಮಾನ ಎನ್ನಲಾಗಿದೆ. ಟಿಕೆಟ್ ಅನೌನ್ಸ್ ಆದಾಗ ಯಾರ ನಿರ್ಧಾರ ಏನಾಗಲಿದೆ ಎಂಬ ಸ್ಪಷ್ಟತೆ ಸಿಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment