ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಡೆಗೂ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಜೊತೆಗೆ ಕೈಜೋಡಿಸಿ, ತಮ್ಮ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ ದಳಪತಿಗಳು. ಮೂರಕ್ಕೆ ಮೂರು ಸ್ಥಾನ ಗೆಲ್ಲುವ ಭರವಸೆ ಇತ್ತು. ಆದರೆ ಹಾಸನದ ಪೆನ್ ಡ್ರೈವ್ ಪ್ರಕರಣದಿಂದಾಗಿ ಹಾಸನ ಜೆಡಿಎಸ್ ನಿಂದ ಕೈ ತಪ್ಪಿತು. ಕಳೆದ ಬಾರಿ ಮಂಡ್ಯ ಕಳೆದುಕೊಂಡಿದ್ದ ಜೆಡಿಎಸ್, ಈ ಬಾರಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಕುಮಾರಸ್ವಾಮಿ ಗೆದ್ದು ಬೀಗಿದ್ದಾರೆ.
ಈ ಬಾರಿ ಬಿಜೆಪಿ ಜೊತೆಗೆ ಕೈ ಜೋಡಿಸಿದ್ದರಿಂದ ಕುಮಾರಸ್ವಾಮಿ ಗೆಲುವು ಕಂಡರೆ ಖಂಡಿತಾ ಕೇಂದ್ರ ಸಚಿವರಾಗುತ್ತಾರೆ ಎಂಬ ಮಾತಿತ್ತು. ಇದೀಗ ಅದರಂತೆ ಬಾರೀ ಮತದ ಅಂತರದಿಂದ ಕುಮಾರಸ್ವಾಮಿ ಗೆದ್ದಿದ್ದಾರೆ. ಇಂದಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬರುವಾಗ ಸಿಹಿ ಸುದ್ದಿಯನ್ನೇ ಹೊತ್ತು ಬರಲಿದ್ದಾರೆ ಎನ್ನಬಹುದು. ಕಳೆದ ಬಾರಿಗಿಂತ ಈ ಬಾರಿ ಜೆಡಿಎಸ್ ಒಂದು ಸ್ಥಾನವನ್ನು ಹೆಚ್ಚಿಸಿಕೊಂಡಿದೆ.
ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರು ಈ ಬಾರಿ ಕೇಂದ್ರ ಸಚಿವರಾಗಲಿದ್ದಾರೆ. ಒಂದು ವೇಳೆ ಕೇಂದ್ರ ಸಚಿವರಾದರೆ ಕುಮಾರಸ್ವಾಮಿ ಕೃಷಿ ಖಾತೆಗೆ ಡಿಮ್ಯಾಂಡ್ ಇಡಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ದೆಹಲಿಯಿಂದ ಬಂದ ಬಳಿಕ ಏನೆಲ್ಲಾ ಚರ್ಚೆಯಾಗಿರಬಹುದು ಎಂಬುದು ತಿಳಿಯಲಿದೆ.
ಈ ಬಾರಿಯ ಲೋಕಸಭಾ ಚುಬಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲವಾದ ಕಾರಣ, ಸರಳ ಬಹುಮತ ಪಡೆದಿರುವ ಎನ್ಡಿಎ ಪಕ್ಷವೇ ಸರ್ಕಾರ ರಚನೆ ಮಾಡಲಿದೆ. ಮೋದಿ ಅವರ ಹ್ಯಾಟ್ರಿಕ್ ಕನಸು ನನಸಾಗುತ್ತಿದೆ. ಹೀಗಾಗಿ ಬಿಜೆಪಿ ಸರ್ಕಾರ ರಚನೆ ಮಾಡುವುದಕ್ಕೆ ಎಲ್ಲಾ ರೀತಿಯ ತಯಾರಿಯನ್ನು ನಡೆಸಿಕೊಳ್ಳುತ್ತಿದೆ. ಗೆಲುವು ಕಂಡ ಬೆನ್ನಲ್ಲೇ ಕುಮಾರಸ್ವಾಮಿ ಕೂಡ ದೆಹಲಿಗೆ ಪ್ಲೈಟ್ ಹತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್