Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶಾಮನೂರು ಬಿಜೆಪಿಗೆ ಹೋಗಿದ್ದರೆ ಇಷ್ಟೊತ್ತಿಗೆ ಕೇಂದ್ರ ಮಂತ್ರಿ ಆಗಿರುತ್ತಿದ್ದರು : ಹೆಚ್ ಡಿ ರೇವಣ್ಣ

---Advertisement---

 

ಹಾಸನ: ಮೊದಲೇ ರಾಜ್ಯ ರಾಜಕೀಯದಲ್ಲಿ ಲಿಂಗಾಯತರಿಗೆ ಹೆಚ್ಚಿನ ಸ್ಥಾನಮಾನ ಸಿಕ್ಕಿಲ್ಲ ಎಂಬ ಶಾಮನೂರು ಶಿವಶಂಕರಪ್ಪ ಮಾತು ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಲಿಂಗಾಯತರಿಗೆ ತಮ್ಮ ಸರ್ಕಾರದಲ್ಲಿ ಎಷ್ಟೆಲ್ಲಾ ಸ್ಥಾನಮಾನ ಕೊಟ್ಟಿದ್ದೇವೆ ಎಂಬುದನ್ನು ದಾಖಲೆ ಸಮೇತ ಇಟ್ಟಿದ್ದಾರೆ. ಆದರೆ ಇದರ ನಡುವೆ ವಿಪಕ್ಷಗಳು ಶಾಮನೂರು ಮಾತಿಗೆ ಬಲ‌ ನೀಡುತ್ತಿದ್ದಾರೆ.‌

ಇಂದು ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಬಗ್ಗೆ ಮಾತನಾಡಿದ ಹೆಚ್ ಡಿ ರೇವಣ್ಣ, ಶಾಮನೂರು ಶಿವಶಂಕರಪ್ಪ ಬಿಜೆಪಿಯಲ್ಲಿ ಇದ್ದಿದ್ದರೆ ಇಷ್ಟೊತ್ತಿಗೆ ಕೇಂದ್ರದ ಮಂತ್ರಿಯಾಗುತ್ತಿದ್ದರು ಎಂದಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರ ಕಡೆಗಣನೆ ಆಗುತ್ತಿದೆ ಎಂದು ಹೇಳಿರುವ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಸರಿಯಾಗಿಯೇ ಇದೆ ಎಂದು ಬೆಂಬಲ ಸೂಚಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಇವರ ಯೋಗ್ಯತೆಗೆ ಒಬ್ಬೆ ಒಬ್ಬ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಹಾಕಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಈಗ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಬಂದಿದೆ. 60 ವರ್ಷ ಅವರಿಂದ ವೋಟ್ ಹಾಕಿಸಿಕೊಂಡಿದ್ದೀರಿ. ಈಗ ಅವರ ಸೇವೆ ಮಾಡಿ. ರಾಜ್ಯದಲ್ಲಿ ಒಂದು ತಿಂಗಳಿನಿಂದ ಅಲ್ಪಸಂಖ್ಯಾತರ ಬಗ್ಗೆ ಕರುಣೆ ತೋರಿಸುತ್ತಿದೆ. ಈ ದೇಶದಲ್ಲಿ ದೇವೇಗೌಡರು ಸಿಎಂ ಆಗೊವರೆಗೆ ಅಲ್ಪಸಂಖ್ಯಾ ತರಿಗೆ ಮೀಸಲಾತಿ ಕೊಟ್ಟಿರಲಿಲ್ಲ. ದೇವೇಗೌಡರು ಸಿಎಂ ಆದ ಬಳಿಕ ಅವರಿಗೆ ಮೀಸಲಾತಿ ಕೊಟ್ಟರು. ಇವರು 60 ವರ್ಷ ಏನು ಮಾಡ್ತಾ ಇದ್ದರು ಸ್ವಾಮಿ. ದೇವೇಗೌಡರು ಕಾಂಗ್ರೆಸ್ ಮಾಡದ ಕೆಲಸವನ್ನು ಮಾಡಿದರು. ಮುಸ್ಲಿಮರಿಗೆ 4 % ಮೀಸಲಾತಿ ಕೊಟ್ಟಿದ್ದು ದೇವೇಗೌಡರು. ಇವರು ಅಲ್ಪಸಂಖ್ಯಾತರ ಓಟ್ ಇಟ್ಟುಕೊಳ್ಳಲು ಮಾತ್ರ ಪ್ರಯತ್ನ ಮಾಡ್ತಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment