ಸಿದ್ದರಾಮಯ್ಯ ಕೋಲಾರಕ್ಕೆ ಹೋದ್ರೆ ಮುನಿಯಪ್ಪ ದೇವನಹಳ್ಳಿಗೆ ಹೋಗ್ತಾರಾ..?

suddionenews
1 Min Read

 

ಕೋಲಾರ: ರಾಜ್ಯ ರಾಜಕಾರಣದಲ್ಲಿ ಇದೀಗ ಕೋಲಾರದ್ದೇ ಸುದ್ದಿ. ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟದಲ್ಲಿದ್ದು, ಕೋಲಾರವನ್ನು ಫಿಕ್ಸ್ ಮಾಡಿಕೊಳ್ಳುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಾ ಇದೆ. ಅದಕ್ಕೆ ಪುಷ್ಠಿ ನೀಡುವಂತೆ ಇತ್ತೀಚೆಗೆ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೇಟಿ ಕೂಡ ನೀಡಿ ಬಂದಿದ್ದರು. ಆದ್ರೆ ಈ ವೇಳೆ ಸಿದ್ದರಾಮಯ್ಯ ಅವರ ಮೇಲೆ ಕೆ ಹೆಚ್ ಮುನಿಯಪ್ಪ ತಮ್ಮ ಮುನಿಸನ್ನು ಮುಂದುವರೆಸಿದ್ದರು ಎನ್ನಲಾಗುತ್ತಿದೆ.

ಇದೀಗ ಕೆಲವು ಮೂಲಗಳಿಂದ ಬಂದ ಮಾಹಿತಿ ಪ್ರಕಾರ, ಕೆ ಹೆಚ್ ಮುನಿಯಪ್ಪ ಅವರು ದೇವನಹಳ್ಳಿಯಿಂದ ಸ್ಪರ್ಧೆ ಮಾಡುತ್ತಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ತಯಾರಿ ನಡೆದಿದೆ ಎನ್ನಲಾಗುತ್ತಿದೆ. ಆದ್ರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುನಿಯಪ್ಪ, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಅದರಂತೆ ಹೋಗಬೇಕಾಗುತ್ತದೆ ಎಂದಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಬರುವಂತೆ ಒಂದು ವರ್ಷದಿಂದಾನು ಒತ್ತಾಯವಿದೆ. ಇಲ್ಲಿಯವರೆಗೂ ಹೈಕಮಾಂಡ್ ದೇವನಹಳ್ಳಿಗೆ ಹೋಗಿ ಎಂದು ಹೇಳಿಲ್ಲ. ಒಂದು ವೇಳೆ ದೇವನಹಳ್ಳಿಯಲ್ಲಿ ನಿಲ್ಲಿ ಎಂದರೆ ನಾನು ಅಲ್ಲಿಯೇ ನಿಲ್ಲಬೇಕಾಗುತ್ತದೆ ಎಂದಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿದ್ದು, ಅವರು ಕೋಲಾರಕ್ಕೆ ಬಂದಾಗ ನಾನು ಗುಜರಾತ್ ಪ್ರವಾಸದಲ್ಲಿ ಇದ್ದೆ. ಹೀಗಾಗಿ ಜೊತೆಯಾಗುವುದಕ್ಕೆ ಸಾಧ್ಯವಾಗಲಿಲ್ಲ. ಆದರೆ ಅವರು ಕೋಲಾರದಲ್ಲಿ ನಿಂತರೆ ಗೆಲುವು ಬಹಳ ಸುಲಭ. ಎಲ್ಲರು ಒಟ್ಟಾಗಿ ಕೆಲಸ ಮಾಡಿದರೆ ಗೆಲ್ಲಲು ಕಷ್ಟವಿಲ್ಲ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *