ಬೇಡಿಕೆ ಈಡೇರದೆ ಇದ್ದರೆ 25 ಲಕ್ಷ ಜನರೊಂದಿಗೆ ಮುತ್ತಿಗೆ : ಎಚ್ಚರಿಕೆ ನೀಡಿದರಾ ಬಸವಜಯ ಮೃತ್ಯುಂಜಯ ಸ್ವಾಮೀಜಿ..?

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಬೇಕು ಎಂದು ಬಹಳ ವರ್ಷಗಳಿಂದಾನು ಒತ್ತಾಯ ಕೇಳಿ ಬರುತ್ತಿದೆ. ಆಗಾಗ ಎಚ್ಚರಿಕೆಯನ್ನು ಕೊಡುವ ಸಮುದಾಯ ಇದೀಗ ಮತ್ತೆ ಸ್ಟ್ರಾಂಗ್ ಆಗಿ ಎಚ್ಚರಿಕೆ ನೀಡಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೋದಲ್ಲಿ 25 ಲಕ್ಷ ಜನರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದ್ದು, ಸರ್ಕಾರದಿಂದ ನಮಗೆ ಸ್ಪಂದನೆ ಸಿಕ್ಕಿಲ್ಲ ಎಂದು ಹೇಳುವ ಹಾಗಿಲ್ಲ. ಆದರೆ ನೀಡಿದ ಭರವಸೆಗೆ ತಕ್ಕಂತೆ ಆದೇಶ ಹೊರಡಿಸಿಲ್ಲ. ಬಸವರಾಜ್ ಬೊಮ್ಮಾಯಿ ಅವರು ಮೂರು ತಿಂಗಳೊಳಗೆ ಭರವಸೆ ಈಡೇರಿಸುತ್ತೀವಿ ಎಂದಿದ್ದರು. ಆದರೆ ಆ ಭರವಸೆ ಈಗ ಸುಳ್ಳಾಗಿದೆ. ಸರ್ಕಾರಕ್ಕೆ ಎಚ್ಚರಿಕೆ ನೀಡಲೆಂದೆ ಈ ಸಮಾವೇಶ ನಡೆಸುತ್ತಿದ್ದೇವೆ. ಈ ಸಮಾವೇಶದಲ್ಲಿ ನಾವೂ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳುತ್ತೇವೆ.

ಜೊತೆಗೆ ಸಮಾವೇಶದ ಮೂಲಕವೇ ಮುಖ್ಯಮಂತ್ರಿ ಅವರಿಗೆ ಕೆಲವೊಂದು ಪ್ರಶ್ನೆಗಳನ್ನು ಕೇಳುತ್ತೇವೆ. ನಿಮಗೆ ನಮ್ಮ ಬೇಡಿಕೆಯನ್ನು ಈಡೇರಿಸುವ ಮನಸ್ಸು ಇದೆಯೋ.. ಇಲ್ಲವೋ..? ಆಗದಿದ್ದರೆ ಆಗುವುದಿಲ್ಲ ಅಂತ ಹೇಳಿ. ನಿಮ್ಮ ರಾಜಕೀಯ ಭವಿಷ್ಯಕ್ಕೆ ನಾವೇನು ತೊಂದರೆ ಮಾಡುವುದಿಲ್ಲ. ನಾವೂ ನಮ್ಮ ಹೋರಾಟವನ್ನಷ್ಟೇ ಮುಂದುವರೆಸುತ್ತೇವೆ. ನಮ್ಮ ಬೇಡಿಕೆಗಳಿಗೆ ಮನ್ನಣೆ ಸಿಗದೆ ಇದ್ದರೆ 25 ಲಕ್ಷ ಜನರೊಂದಿಗೆ ವಿಧಾನಸೌಧ ಮುತ್ತಿಗೆ ಹಾಕಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

49 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago