Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಗಲೇ ಚುನಾವಣೆಯಾದರೆ ಕಾಂಗ್ರೆಸ್ ಗೆ ಎಷ್ಟು ಲಾಭ..ಬಿಜೆಪಿಗೆ ಎಷ್ಟು ನಷ್ಟ: ಜಗದೀಶ್ ಶೆಟ್ಟರ್ ಹೇಳಿದ್ದೇನು..?

Facebook
Twitter
Telegram
WhatsApp

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಈಗಾಗಲೇ ತಯಾರಿಗಳು ನಡೆಯುತ್ತಿವೆ. ತಮ್ನ ತಮ್ಮ ಪಕ್ಷಕ್ಕೆ ಪ್ರಭಾವಿಗಳನ್ನು ಬರ ಮಾಡಿಕೊಳ್ಳುವ ಕೆಲಸ ಕೂಡ ನಡೆಯುತ್ತಿದೆ. ಇದರ ನಡುವೆ ಜಗದೀಶ್ ಶೆಟ್ಟರ್, ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿಯಲ್ಲಿ ಎಲ್ಲವೂ ಹದಗೆಟ್ಟು ಹೋಗಿದೆ. ಮುಂಬರುವ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಸ್ಥಾನಗಳಿಂದ ಅವರು ಹೀನಾಯವಾಗಿ ಸೋಲು ಕಾಣುತ್ತಾರೆ ಎಂದಿದ್ದಾರೆ.

ಈ ಹಿಂದೆ 2018 ರಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸಭೆ ಚುನಾವಣಾ ನಡೆತು, ಆವಾಗ ಎಷ್ಟೇ ಗುದ್ದಾಡಿದರು ಕೊನೆಗೆ ಬಂದು ನಿಂತಿದ್ದು 104ಕ್ಕೆ. ಇವತ್ತು ಬಿಜೆಪಿ ಹದಗೆಟ್ಟು ಹೋಗಿದೆ. ಈಗ ಚುನಾವಣಾ ನಡೆದ್ರೆ 66 ಅಲ್ಲಾ 40 ಸೀಟ್ ಸಹ ಬಿಜೆಗೆ ಬರೋದಿಲ್ಲ. ಬಿಜೆಪಿ ರಿಪೇರಿ ಮಾಡಲಾಗದಷ್ಟು ಹದಗೆಟ್ಟಿದೆ. ವಿಜಯೇಂದ್ರ ಅಲ್ಲ ಯಾರೂ ಅಧ್ಯಕ್ಷ ಆದರೂ ಅದನ್ನು ಸರಿ ಮಾಡಲು ಆಗುವುದಿಲ್ಲ. ಇನ್ನು ಐದು ರಾಜ್ಯದ ಚುನಾವಣೆಯಲ್ಲೂ ಕಾಂಗ್ರೆಸ್ ಗೆ ಒಳ್ಳೆಯ ಫಲಿತಾಂಶ ಬರಲಿದೆ ಎಂದಿದ್ದಾರೆ.

 

ಯಾವುದೇ ರಾಜಕೀಯ ಪಕ್ಷಗಳು ಕೊನೆಯ ಹಂತದವರಿಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ತೆಗೆದುಕೊಂಡು ಹೋಗಬಾರದು. ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕು. ಇದರಿಂದಾಗಿ ಅಭ್ಯರ್ಥಿಗಳು ಅತೀ ಹೆಚ್ಚು ಜನರನ್ನು ತಲುಪಬಹುದು. ಇದು ಎಲ್ಲಾ ರಾಜಕೀಯ ಪಕ್ಷಗಳಿಗೆ ಒಳ್ಳೆಯದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!