Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರ್ವಜನಿಕರು ಕಾಲಕಾಲಕ್ಕೆ ಮೂಳೆ ಸಾಂದ್ರತೆ ರೋಗಕ್ಕೆ ಚಿಕಿತ್ಸೆ ಪಡೆದರೆ ರೋಗದಿಂದ ಮುಕ್ತಿ : ಡಾ.ವೆಂಕಟೇಶ್ 

Facebook
Twitter
Telegram
WhatsApp

 

ಸುದ್ದಿಒನ್, ಚಳ್ಳಕೆರೆ, ಜೂ.13 : ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರ ಜೀವನಶೈಲಿ ಬದಲಾವಣೆ ಕಾಣುತ್ತಿದ್ದು ವೇಗದ ಬದುಕಿನಿಂದ ತಮ್ಮ ಆರೋಗ್ಯದ ಕಡೆ ಗಮನಹರಿಸದೆ ನಿರ್ಲಕ್ಷ ವಹಿಸುತ್ತಿರುವುದರಿಂದ ಕೀಲು ಮೂಳೆ ರೋಗಗಳಿಗೆ ತುತ್ತಾಗುತ್ತಿದ್ದು ಸಾರ್ವಜನಿಕರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕೀಲು ಮೂಳೆ ತಜ್ಞ ಡಾ. ವೆಂಕಟೇಶ್ ಅಭಿಪ್ರಾಯ ಪಟ್ಟರು. 

ನಗರದ ಸುರಕ್ಷಾ ಪಾಲಿ ಕ್ಲಿನಿಕ್ ಆಸ್ಪತ್ರೆ ಆವರಣದಲ್ಲಿ ಸುರಕ್ಷಾ ಪಾಲಿ ಕ್ಲಿನಿಕ್ ಮತ್ತು ನೇತಾಜಿ ಸ್ನೇಹ ಬಳಗ ಹಾಗೂ ನಗರಸಭೆ ನೂತನ ನಾಮನಿರ್ದೇಶನ ಸದಸ್ಯರ ಸಹಭಾಗಿತ್ವದಲ್ಲಿ ಉಚಿತ ಮೂಳೆ ಸಾಂದ್ರಿತ ಪರೀಕ್ಷಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ರೋಗವು ಹೆಚ್ಚಿನದಾಗಿ ಎಳೆ ವಯಸ್ಸಿನ ಮಕ್ಕಳಲ್ಲಿ ಮತ್ತು ವೃದ್ಧಾಪ್ಯ ವಯಸ್ಸಿನ ಸ್ತ್ರೀಯರಲ್ಲಿ ಕಂಡುಬರುತ್ತದೆ ತಾಯಿ ಮಗುವಿಗೆ ಸ್ಥನ್ಯ ಪಾನ ಮಾಡಿಸದೆ ಇದ್ದಾಗ ರೋಗಕ್ಕೆ ತುತ್ತಾಗಿ ಅಂಗವಕಲ್ಯ ಆಗುವ ಸಂಭವಿಸುತ್ತದೆ ಹಾಗೆಯೇ ವೃದ್ಧಾಪ್ಯದಲ್ಲಿ ಸ್ತ್ರೀಯರಿಗೆ ಹಾರ್ಮೋನ್ ಗಳ ವ್ಯತ್ಯಾಸದಿಂದಾಗಿ ಕೀಲು ಮೂಳೆಗಳು ಸವೆದು ಮೂಳೆ ಸಾಂದ್ರಿತ ರೋಗಕ್ಕೆ ಈಡಾಗುತ್ತಾರೆ ಈ ರೋಗವನ್ನು ನಿವಾರಿಸಿಕೊಳ್ಳಲು ಕಾಲಕಾಲಕ್ಕೆ ವೈದ್ಯರನ್ನು ಭೇಟಿ ಮಾಡುವ ಮೂಲಕ ವಾಸಿ ಮಾಡಿಕೊಳ್ಳಬಹುದಾಗಿದೆ ಈ ಮೂಳೆ ಸಾಂದ್ರಿತ ಪರೀಕ್ಷೆಯನ್ನು ಇಂದು ನೇತಾಜಿ ಸ್ನೇಹ ಬಳಗ ಹಾಗೂ ಸುರಕ್ಷಾ ಪಾಲಿ ಕ್ಲಿನಿಕ್ ವತಿಯಿಂದ ಉಚಿತವಾಗಿ ಹಮ್ಮಿಕೊಂಡಿರುವುದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಆಶ್ರಮದ ಪೂಜ್ಯ ತ್ಯಾಗಮಯಿ ಮಾತಾಜಿ ಬಡವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯುತ್ತಿರುವುದು ವಿರಳವಾಗಿದೆ ಹೆಚ್ಚಿನ ಹಣ ನೀಡಿ ರೋಗವನ್ನು ವಾಸಿ ಮಾಡಿಕೊಳ್ಳಲಾಗದೆ ಬಡವರ್ಗದ ಜನರು ಸಾವನ್ನಪ್ಪುವ ಸ್ಥಿತಿಗೆ ತಲುಪುತ್ತಿದ್ದಾರೆ ಇಂತಹ ಸನ್ನಿವೇಶದಲ್ಲಿ ನೇತಾಜಿ ಸ್ನೇಹ ಬಳಗ ಹಾಗೂ ಸುರಕ್ಷಾ ಪಾಲಿಚೈನಿಕ್ ವತಿಯಿಂದ ಉಚಿತವಾಗಿ ಮೂಳೆ ಸಾಂದ್ರತೆ ಪರೀಕ್ಷಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾದದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಸಭೆ ನಾಮನಿರ್ದೇಶಕ ಸದಸ್ಯ ನೇತಾಜಿ ಆರ್ ಪ್ರಸನ್ನ ಮಾಜಿ ನಗರಸಭಾ ಸದಸ್ಯ ಆರ್ ಪ್ರಸನ್ನ ಕುಮಾರ್ ಫರೀದ್ ಖಾನ್ ಕಂಟ್ರಾಕ್ಟರ್ ನಾಗೇಂದ್ರ ಬೋಜರಾಜ ನಗರಸಭೆ ಆರೋಗ್ಯ ನಿರೀಕ್ಷಕಿ ಗೀತಾ ಸರಸ್ವತಿ ರಾಜಮ್ಮ ಡಾ.ಭಾರ್ಗವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕವಾಡಿಗರ ಹಟ್ಟಿ ಅಭಿವೃದ್ದಿಗೆ ಕ್ರಮ :  ನಗರಸಭೆ ಆಯುಕ್ತೆ ರೇಣುಕಾ ಸ್ಪಷ್ಟನೆ

ಚಿತ್ರದುರ್ಗ ಜೂ. 18 : ನಗರದ ಹೊರ ವಲಯದಲ್ಲಿರುವ ಕವಾಡಿಗರ ಹಟ್ಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲನೆಯಲ್ಲಿದ್ದು, ತ್ವರಿತ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಅವರು ತಿಳಿಸಿದ್ದಾರೆ.   ಕಳೆದ

ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಎಂದು ಉದಾಸೀನ ಮಾಡಬೇಡಿ : ಡಾ.ಬಿ.ಗುರುರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂ.18 : ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಸಮಸ್ಯೆಯೆಂದು ಉದಾಸೀನ ಮಾಡಬೇಡಿ. ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ

ಚಿತ್ರದುರ್ಗ | ಹೂವಿನ ಮಾರುಕಟ್ಟೆಯಲ್ಲಿ ಅಳತೆಯಲ್ಲಿ ಮೋಸ : ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್ 18 : ಎ.ಪಿ.ಎಂ.ಸಿ. ಆವರಣದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ಅಳತೆಯಲ್ಲಿ ಮೋಸವಾಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ

error: Content is protected !!