ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಜ.08 : ನಗರದ ಗಾಂಧೀವೃತ್ತದಿಂದ ಜೆ.ಎಂ.ಐ.ಟಿ. ವೃತ್ತದವರೆಗಿನ ದಾವಣಗೆರೆ ರಸ್ತೆಯನ್ನು ಚಳ್ಳಕೆರೆ ಗೇಟ್ನಿಂದ ಕನಕ ವೃತ್ತದವರೆಗಿನ ರಸ್ತೆಯನ್ನು ಅಗಲೀಕರಣ ಮಾಡಿದಂತೆ ಇಷ್ಟೇ ಅಳತೆಯಲ್ಲಿ ಅಗಲೀಕರಣ ಮಾಡಬೇಕು ಇಲ್ಲವಾದಲ್ಲಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಾಗುವುದು ಎಂದು ಚಿತ್ರದುರ್ಗ ನಾಗರಿಕರ ಹಿತರಕ್ಷಣಾ ಸಮಿತಿ ಜಿಲ್ಲಾಡಳಿತವನ್ನು ಎಚ್ಚರಿಸಿದೆ.
ಚಿತ್ರದುರ್ಗ ನಗರದಲ್ಲಿ ಬುಧವಾರ ಚಿತ್ರದುರ್ಗ ನಾಗರಿಕರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಜಿಲ್ಲಾಡಳಿತ ಮತ್ತು ನಗರಸಭೆಯು ಚಿತ್ರದುರ್ಗ ನಗರದ ಮುಖ್ಯ ರಸ್ತೆಯ ಅಗಲೀಕರಣ ಮಾಡಲು ತೀರ್ಮಾನಿಸಿರುವುದು ಸ್ವಾಗತಾರ್ಹ. ತಾವು ನಿರ್ಣಯಿಸಿರುವಂತೆ ನಗರದ ಚಳ್ಳಕೆರೆ ಗೇಟ್ನಿಂದ ಕನಕ ವೃತ್ತದವರೆಗಿನ ರಸ್ತೆಯನ್ನು ಅಗಲೀಕರಣ ಮಾಡುವುದಾಗಿ ತಿಳಿಸಿರುತ್ತೀರಿ. ಇದು ನಗರದ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ನಿರ್ಣಯವಾಗಿದೆ. ನಮ್ಮ ಬೇಡಿಕೆ ಏನೆಂದರೆ, ಈ ರಸ್ತೆಯ ಜೊತೆಗೆ ನಗರದ ಗಾಂಧೀವೃತ್ತದಿಂದ ಜೆ.ಎಂ.ಐ.ಟಿ. ವೃತ್ತದವರೆಗಿನ ದಾವಣಗೆರೆ ರಸ್ತೆಯನ್ನು ಸಹ ಇಷ್ಟೇ ಅಳತೆಯಲ್ಲಿ ಅಗಲೀಕರಣ ಮಾಡಬೇಕು. ಈ ರಸ್ತೆಯ ಅಗಲೀಕರಣ ತುಂಬಾ ಅವಶ್ಯಕತೆ ಇದೆ. ಈ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ. ಎ.ಪಿ.ಎಂ.ಸಿ. ಮುಖ್ಯರಸ್ತೆ, ರೈಲ್ವೆ ನಿಲ್ದಾಣ ಮತ್ತು ಬ್ಯಾಂಕ್ಗಳು ಹಾಗೂ ಪ್ರಮುಖ ವ್ಯಾಪಾರದ ಮಾಲ್ಗಳು ಇರುತ್ತವೆ. ಇದರಿಂದ ಈ ರಸ್ತೆಯಲ್ಲಿ ಹೆಚ್ಚು ವಾಹನಗಳ ಓಡಾಟ ಮತ್ತು ಹೆಚ್ಚಿನ ಜನಸಂದಣಿ ಇರುತ್ತದೆ. ಹಾಗಾಗಿ ಈ ರಸ್ತೆಯ ಅಗಲೀಕರಣದ ನಿರ್ಣಯವನ್ನು ಒಂದು ತಿಂಗಳ ಕಾಲಾವಧಿಯೊಳಗೆ ತೆಗೆದುಕೊಳ್ಳದಿದ್ದರೆ ತೆಗೆದುಕೊಳ್ಳದಿದ್ದರೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಾಗುವುದು ಎಂದಿದ್ದಾರೆ.
ಈ ಸಂದರ್ಭದಲ್ಲಿ ಚಿತ್ರದುರ್ಗ ನಾಗರಿಕರ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಾದ ರುದ್ರೇಶ್.ಪಿ ಓಂಕಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್