Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಜರಾಯಿ ಇಲಾಖೆಯಲ್ಲಿ ವಯಸ್ಸಾದವರಿದ್ದರೆ, ಅವರ ಮಕ್ಕಳಿಗೆ ಕೆಲಸ : ಸರ್ಕಾರದಿಂದ ಆದೇಶ

---Advertisement---

ಬೆಂಗಳೂರು: ಮುಜರಾಯಿ ಇಲಾಖೆಗಳಲ್ಲಿ ಕೆಲಸ ಮಾಡುವವರಿಗೆ ಸರ್ಕಾರದಿಂದ ಆದೇಶ ಹೊರಡಿಸಿದೆ. ಇಲಾಖೆಯಲ್ಲಿ ವಯಸ್ಸಾದವರು ಇದ್ದರೆ ಅಥವಾ ಅನಾರೋಗ್ಯದಿಂದ ಬಳಲುತ್ತಿರುವವರು ಇದ್ದರೆ, ಅವರ ಮಕ್ಕಳು ಕೆಲಸವನ್ನು ಮುಂದುವರೆಸಬಹುದಾಗಿದೆ. ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಾಲಯಗಳಲ್ಲಿ ಪೂಜೆ ಸಲ್ಲಿಸುತ್ತಿರುವ ವಯಸ್ಸಾಗಿದ್ದರೆ ಅಥವಾ ಅನಾರೋಗ್ಯಕ್ಕೆ ತುತ್ತಾಗಿ ಸೇವೆ ಸಲ್ಲಿಸಲು ಸಾಧ್ಯವಾಗದೆ ಇದ್ದಾಗ ಅವರ ಮಕ್ಕಳಿಗೆ ಹುದ್ದೆಯನ್ನು ನೀಡಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

 

ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುವ ಅರ್ಚಕರು ನಿಧನದ ಬಳಿಕ ಅವರ ಮಕ್ಕಳನ್ನು ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈಗ ಸರ್ಕಾರದ ಆದೇಶದಲ್ಲಿ ಬದಲಾವಣೆಯಾಗಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದರು ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಸುಮಾರು, 34 ಸಾವಿರಕ್ಕೂ ಅಧಿಕ ಸಿ ಗ್ರೇಡ್ ದೇವಸ್ಥಾನಗಳು ಇದಾವೆ. ಈ ದೇವಾಲಯಗಳಿಗೆ ಅವಕಾಶ ನೀಡಲಾಗಿದೆ.

 

ಅರ್ಚಕರ ಸಂಘ ಸರ್ಕಾರದ ಬಳಿ ಈ ಸಂಬಂಧ ಮನವಿ ಮಾಡಿಕೊಳ್ಳಲಾಗಿತ್ತು. ಅನಾರೋಗ್ಯದಿಂದ ಇರುವ ಅರ್ಚಕರ ಮಕ್ಕಳಿಗೆ ಅವಕಾಶ ಮಾಡಿಕೊಡಲು ಮನವಿ ನಾಡಿದ್ದರು. ಇದೀಗ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಕಾನೂನು ಬದ್ಧ ವಾರಸುದಾರರಿಗೆ ನೀಡಲು ಸೂಚನೆ ನೀಡಿದೆ. ಆಯಾ ತಾಲೂಕಿನ ತಹಶಿಲ್ದಾರ್ ಹಂತದಲ್ಲಿ ವರ್ಗಾವಣೆ ಮಾಡಲು ಸೂಚನೆ ನೀಡಲಾಗಿದೆ.

ಸರ್ಕಾರದ ಇಒ ರೀತಿಯ ನಿರ್ಧಾರ ಸಾಕಷ್ಟು ಅರ್ಚಕರಿಗೆ ಅನುಕೂಲವಾಗಲಿದೆ. ಮರಣದ ತನಕ ಅನಾರೋಗ್ಯವಿದ್ದರು ಅರ್ಚಕರೇ ಪೂಜೆ ಮಾಡಬೇಕಿತ್ತು. ಆದರೆ ಈಗ ಸರ್ಕಾರದ ನಿರ್ಧಾರದಿಂದ ಅರ್ಚಕರು ತಮ್ಮ ಮಕ್ಕಳಿಗೆ ಅಧಿಕಾರ ಹಸ್ತಾಂತರ ಮಾಡಬಹುದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment