Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

Facebook
Twitter
Telegram
WhatsApp

 

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ ಚೆನ್ನಾಗಿ ನೀವೂ ತಿಳಿದುಕೊಂಡಿದ್ದೀರಿ. ಅವರ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದಿದ್ದಾರೆ.

ನಮ್ಮ ತಂದೆ ದೇವೇಗೌಡರಿಗೆ 92 ವರ್ಷ ವಯಸ್ಸಾಗಿದೆ. ತಾಯಿಗೆ 89 ವರ್ಷ. ಅವರು ಯಾವ ರೀತಿ ಬದುಕಿದ್ದಾರೆಂದು ಕಣ್ಣಾರೆ ಕಂಡಿದ್ದೇನೆ. ಅವರ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ, ತಂದೆ ತಾಯಿಯನ್ನು ಕಳೆದುಕೊಳ್ಳುತ್ತೇವೆ ಎನ್ನುವ ನೋವಿನಲ್ಲಿ ಅವರಿಗೆ ಆತ್ಮಸ್ಥೈರ್ಯ ತುಂಬುವುದಕ್ಕೆ ಎರಡು ದಿನ ಮನೆಗೆ ಹೋಗಿದ್ದೆ. ಆದರೆ ಹೆಚ್ಡಿಕೆ, ರೇವಣ್ಣ ಕುಟುಂಬದ ಸಂಘಟಿತ ಪಾಪದ ಕೃತ್ಯ ಎಂದು ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಯಾವ ಎಸ್ಐಟಿ ತನಿಖೆ ನಡೆಸುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ತಂದೆ ತಾಯಿಯ ಸಂಬಂಧದ ಆತ್ಮೀಯತೆ ಹಾಗೂ ಬಾಂಧವ್ಯ ಇಲ್ಲದೆ ಇರಬಹುದು. ಆದರೆ ನಾವೂ ಆ ತರ ಬದುಕಿಲ್ಲ‌. ನಮಗೆ ನಮ್ಮ ತಂದೆ ತಾಯಿಯ ಆರೋಗ್ಯವೇ ಮುಖ್ಯ. ನಾನು ಹೊರಗಡೆ ರಾಜಕೀಯ ಪ್ರಚಾರಕ್ಕೆ ಹೋದರು, ಸಭೆ ಸಮಾರಂಭಗಳಿಗೆ ಹೋದರು ಕೂಡ ರಾತ್ರಿ ಮನೆಗೆ ವಾಪಾಸ್ ಹೋಗಿ ತಂದೆ ತಾಯಿಗೆ ಧೈರ್ಯ ಹೇಳಿ ಹೋಗುತ್ತಿದ್ದೆ. ದೇವೇಗೌಡರ ಮನೆ ಎಂದು ಹೇಳುತ್ತೀರಿ. ಆದರೆ ದೇವೇಗೌಡರಿಗೆ ಸ್ವಂತ ಮನೆಯಿಲ್ಲ. ಮಗಳ ಮನೆಯಲ್ಲಿ ಇದ್ದಾರೆ. ರೇವಣ್ಣ ಕಿಡ್ನ್ಯಾಪ್ ಮಾಡಿಸಿದ್ದಾರಾ..? ಪಾಪ ಅವರನ್ನು ತೆಗೆದುಕೊಂಡು‌ ಹೋಗಿ ಒಳಗೆ ಕೂರಿಸಿದ್ದೀರಿ. ಅನ್ಯಾಯ ಆದ ಹೆಣ್ಣು ಮಕ್ಕಳಿಗೂ ನ್ಯಾಯ ಸಿಗಬೇಕು ಅಂದ್ರೆ ಈ ಪ್ರಕರಣವನ್ನು ಸಿಬಿಐಗೆ ನೀಡಿ ಎಂದು ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!