ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ ಜನರ ಸಮಸ್ಯೆಯನ್ನು ತ್ವರಿತವಾಗಿ ಸರಿ ಮಾಡುವುದಕ್ಕೆ ಇದೀಗ ಬೆಸ್ಕಾಂ ವಾಟ್ಸಾಪ್ ನಂಬರ್ ಸೌಲಭ್ಯ ಶುರು ಮಾಡಿದೆ. ಎಲ್ಲಿ, ಏನೇ ಸಮಸ್ಯೆ ಆಗಿ ಪವರ್ ಕಟ್ ಆದರೂ, ತಕ್ಷಣ ಒಂದು ವಾಟ್ಸಾಪ್ ಮಾಡಿದರೆ ಸಾಕು ಬೆಸ್ಕಾಂನವರು ಅಲ್ಲಿಗೆ ಬಂದು ಸಮಸ್ಯೆಯನ್ನು ಬಗೆಹರಿಸುತ್ತಾರೆ.
ಬೆಸ್ಕಾಂ ಸೂಚಿಸಿದ ನಂಬರ್ ಗೆ ಹಾನಿಯಾದ ವಿದ್ಯುತ್ ಕಂಬದ ಫೋಟೋ ಹಾಗೂ ವಿಳಾಸವನ್ನು ಮೆಸೇಜ್ ಮಾಡಬೇಕಿದೆ. ಈ ಮೆಸೇಜ್ ಬಂದ ಕೂಡಲೇ ಬೆಸ್ಕಾಂ ತನ್ನ ಸಿಬ್ಬಂದಿಯನ್ನು ಕಳುಹಿಸಿ ಕೊಡಲಿದೆ. ಸಮಸ್ಯೆಗೆ ತಕ್ಷಣವೇ ಪರಿಹಾರ ಸಿಗಲಿದೆ. ನಿಮ್ಮ ನಿಮ್ಮ ಪ್ರದೇಶಗಳಿಗೆ ಬೇರೆ ಬೇರೆ ನಂಬರ್ ಇದೆ. ಸೇವ್ ಮಾಡಿಕೊಂಡು ಪರಿಹಾರ ಕಂಡುಕೊಳ್ಳಬಹುದು.
ಬೆಂಗಳೂರು ಪೂರ್ವ- 8277884013
ಬೆಂಗಳೂರು ಪಶ್ಚಿಮ- 8277884012
ಬೆಂಗಳೂರು ಉತ್ತರ- 8277884014
ಬೆಂಗಳೂರು ದಕ್ಷಿಣ- 8277884011
ಕೋಲಾರ- 8277884015
ಚಿಕ್ಕಬಳ್ಳಾಪುರ- 8277884016
ಬೆಂಗಳೂರು ಗ್ರಾಮಾಂತರ- 827788401
ರಾಮನಗರ-8277884018
ತುಮಕೂರು- 8277884019
ಚಿತ್ರದುರ್ಗ- 8277884020
ದಾವಣಗೆರೆ- 8277884021 ಈ ನಂಬರ್ ಗೆ ಕರೆ ಮಾಡುವ ಮೂಲಕ ಮಳೆಗಾಲದಲ್ಲಿ ಎದುರಾಗುವ ಕರೆಂಟ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…