ಹೊಟ್ಟೆಯ ಮೇಲ್ಭಾಗದಲ್ಲಿ ನೋವು, ಸುಸ್ತು ಇದ್ದರೆ ಕಡೆಗಣಿಸಬೇಡಿ : ಲಿವರ್ ಡ್ಯಾಮೇಜ್ ಆಗಿರಬಹುದು

 

ನಮ್ಮ ದೇಹದಲ್ಲಿ ಯಕೃತ್ ಬಹಳ ಮುಖ್ಯ. ಇದನ್ನು ಹಾಳಾಗದಂತೆ ನೋಡಿಕೊಳ್ಳಬೇಕು. ಆದರೆ ಈ ಯಕೃತ್ ಒಂದು ಕಡೆ ಹಾಳಾದರೂ ಮತ್ತೊಂದು ಕಡೆ ಕೆಲಸ ಮಾಡುತ್ತಾ ನಮ್ಮ ದೇಹವನ್ನು ಸಮತೋಲನವಾಗಿಟ್ಟಿರುತ್ತದೆ. ಅದರ ಜೊತೆ ಜೊತೆಗೇನೆ ಒಂದಷ್ಟು ರೋಗ ಲಕ್ಷಣಗಳು ಕಾಣಿಸುತ್ತವೆ ಆಗಲೇ ನೀವೂ ಎಚ್ಚರಗೊಳ್ಳಬೇಕು. ಜೀವರಾಸಾಯನಿಕ ಕ್ರಿಯೆಯನ್ನು ನಿಯಂತ್ರಿಸುವುದು, ದೇಹದಿಂದ ಕಲ್ಮಶಗಳನ್ನು ನಿವಾರಿಸುವುದು ಮತ್ತು ಜೀರ್ಣಕ್ರಿಯೆಯನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ. ಹಾಗಾದ್ರೆ ಯಕೃತ್ ಸಮಸ್ಯೆಯಾದರೆ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ ಎಂಬ ಮಾಹಿತಿ ಹೀಗಿದೆ‌.

 

* ರೋಗಿಯ ಕಣ್ಣುಗಳು ಮತ್ತು ಚರ್ಮದಲ್ಲಿ ಹಳದಿ ಬಣ್ಣ ಕಾಣಿಸಿ ಕೊಳ್ಳುತ್ತದೆ.

* ಹೊಟ್ಟೆಯ ಬಲಭಾಗದ ಕೊಂಚ ಮೇಲೆ, ಪಕ್ಕೆಲುಬುಗಳು ಮುಗಿಯವ ಭಾಗದಲ್ಲಿ ತೀಕ್ಷ್ಣ ನೋವು ಕಾಣಿಸಿ ಕೊಳ್ಳುತ್ತದೆ. ಜೊತೆಗೇ ಈ ಭಾಗದಲ್ಲಿ ಊದಿಕೊಂಡಿರುತ್ತದೆ.

* ಸತತವಾದ ಬಳಲಿಕೆ ಮತ್ತು ನಿಃಶಕ್ತಿಯನ್ನು ಉಂಟು ಮಾಡುತ್ತದೆ. ಇದರಿಂದ ದಿನನಿತ್ಯದ ಕೆಲಸಗಳು ಸಾಧ್ಯವಾಗುವುದಿಲ್ಲ ಮತ್ತು ಉತ್ಪಾದನೆಯೂ ಕಡಿಮೆಯಾಗುತ್ತದೆ.

* ರೋಗಿಗಳ ದೇಹದ ತೂಕ ಶೀಘ್ರವಾಗಿ ಇಳಿಮುಖವಾಗುತ್ತಾ ಸಾಗುತ್ತದೆ ಹಾಗೂ ಇವರಿಗೆ ಹಸಿವೂ ಕಡಿಮೆ ಯಾಗುತ್ತದೆ. ಏನನ್ನು ತಿಂದರೂ ಶಕ್ತಿ ಸಿಗದೇ ಹೋಗುತ್ತದೆ.

* ಸತತವಾಗಿ ವಾಕರಿಕೆ ಮತ್ತು ವಾಂತಿಗೆ ಕಾರಣವಾಗುತ್ತದೆ. ಇದು ಆಹಾರ ಸೇವನೆ ಸಾಧ್ಯವಾಗದಂತೆ ಹಾಗೂ ಸೇವಿಸಿದರೂ ಇದರ ಪೋಷಕಾಂಶಗಳು ಪೂರ್ಣವಾಗಿ ದೊರಕದಂತೆ ಮಾಡುತ್ತದೆ.

* ಮೈ ಇಡೀ ತುರಿಕೆಗೆ ಒಳಗಾಗುತ್ತದೆ ಹಾಗೂ ಚಡಪಡಿಕೆಯನ್ನು ಉಂಟುಮಾಡುತ್ತದೆ. ಇಡಿಯ ದಿನ ತುರಿಸುತ್ತಾ ರೋಗಿಯ ಜೀವನ ಬಲುವಾಗಿಯೇ ಬಾಧೆಗೊಳಗಾಗುತ್ತದೆ.

* ಮಲ ಮೂತ್ರಗಳ ಬಣ್ಣಗಳು ಬದಲಾಗುತ್ತವೆ. ಮೂತ್ರದ ಬಣ್ಣ ಅತಿ ಗಾಢವಾಗುವುದು ಮತ್ತು ಮಲದ ಬಣ್ಣ ಪೇಲವವಾಗುವುದು. ಇವು ಯಕೃತ್‌ನ ಹಾನಿಯನ್ನು ಸ್ಪಷ್ಟವಾಗಿ ಪ್ರಕಟಿಸುತ್ತವೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

39 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago