Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಮಾಜಿಕ ಕಾರ್ಯಗಳಿಗೆ ಜನ ಬೆಂಬಲವಿದ್ದರೆ ಪೂರ್ವಜರು ಬಿಟ್ಟು ಹೋಗಿರುವ ಆದರ್ಶ, ಮೌಲ್ಯಗಳು ಉಳಿಯಲು ಸಾಧ್ಯ : ಎಸ್.ಆರ್. ಲಕ್ಷ್ಮಿಕಾಂತ ರೆಡ್ಡಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಡಿ, 18 : ಧಾರ್ಮಿಕ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಪುಣ್ಯ ವಿಶೇಷಗಳಲ್ಲಿ ಒಂದು. ಇಂತಹ ಸದಾವಕಾಶ ನನಗೆ ನಮ್ಮ ಸಂಸ್ಥೆಯ ಮೂಲಕ  ಒದಗಿ ಬಂದಿದೆ ಎಂದು ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಸಾಮಾಜಿಕ ಕಾರ್ಯಗಳಿಗೆ ಜನ ಬೆಂಬಲ  ಕೊಡುತ್ತಿದ್ದರೆ ನಮ್ಮ ಪೂರ್ವಜರು ಬಿಟ್ಟು ಹೋಗಿರುವ ಆದರ್ಶ ಮೌಲ್ಯಗಳು ಉಳಿಯಲು ಸಾಧ್ಯ ಎಂದು  ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರಿ ಧುರೀಣ ಎಸ್.ಆರ್. ಲಕ್ಷ್ಮಿಕಾಂತ ರೆಡ್ಡಿ ಅವರು ಅಭಿಪ್ರಾಯಪಟ್ಟರು.

ನಗರದ ಜೆಸಿಆರ್ ಬಡಾವಣೆಯ ಗಣಪತಿ ದೇವಾಲಯದಲ್ಲಿ ಗಮಕ ಕಲಾಭಿಮಾನಿಗಳ ಸಂಘ, ಜೆಸಿಆರ್ ಗಣಪತಿ ದೇವಾಲಯ ಸಮಿತಿ ಹಾಗೂ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ ಚಿತ್ರದುರ್ಗ, ಇವರುಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಮಾಸಿಕ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ರಾಮಾಯಣ ಕಾವ್ಯದ ಸೀತಾನ್ವೇಷಣೆ ಭಾಗದ ವಾಚನವನ್ನು ಶಿವಮೊಗ್ಗದ ಹೊಸಳ್ಳಿಯ ಪ್ರಸಾದ್ ಭಾರಧ್ವಜ್ ಅವರು ಹೃದಯಂಗಮವಾಗಿ ವಾಚನ ಮಾಡಿದರು. ಇದಕ್ಕೆ ಸಂವಾದಿಯಾಗಿ ಚಿಕ್ಕಮಗಳೂರಿನ ಗಮಕಿ, ನಿವೃತ್ತ ಉಪನ್ಯಾಸಕರಾದ ಕಲಾಶ್ರೀ ರಾಮಸುಬ್ರಾಯ ಶೇಟ್ ಅವರು ಕಾವ್ಯದ ವ್ಯಾಖ್ಯಾನವನ್ನು  ಬಹು ಸೂಕ್ಷ್ಮವಾದ  ತತ್ವಾದರ್ಶಗಳನ್ನು ಭಾವಪೂರ್ಣವಾಗಿ  ಮನಗಾಣಿಸಿದರು.
ಜೆಸಿಆರ್ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷರಾದ ಜಿ. ಆರ್. ಕೃಷ್ಣಮೂರ್ತಿ ಅವರು ಮುಖ್ಯ ಅತಿಥಿಗಳಾಗಿ  ಭಾಗವಹಿಸಿದ್ದರು.

ಗಮಕಲಾಭಿಮಾನಿಗಳ ಸಂಘದ ಅಧ್ಯಕ್ಷೆ ಕೆ .ಆರ್. ರಮಾದೇವಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಗಮಕಲಾ ಸಂಘಕ್ಕೆ ಇದೀಗ  40 ವರ್ಷ ತುಂಬಿದೆ.ಜನತೆಯ  ಸಹಕಾರ, ನೆರವು ಮತ್ತು ಪ್ರೋತ್ಸಾಹ ಇದೇ ರೀತಿ ಸದಾ ಸಿಕ್ಕರೆ ನಲವತ್ತು  ಕಾರ್ಯಕ್ರಮಗಳನ್ನು ಜನತೆಯ ಹತ್ತಿರವೇ ಹೋಗಿ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮರ್ಚೆಂಟ್ಸ್ ಬ್ಯಾಂಕ್ ನ ಅಧ್ಯಕ್ಷರಾದ ಎಸ್ .ಆರ್  ಲಕ್ಷ್ಮಿ ಕಾಂತ ರೆಡ್ಡಿ ಅವರನ್ನು ಸಂಘಗಳ  ವತಿಯಿಂದ ಸನ್ಮಾನಿಸಿ  ಗೌರವಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!