Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾನೂನು ಅರಿವು ಇದ್ದರೆ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬಹುದು : ಬಸವಪ್ರಭು ಸ್ವಾಮೀಜಿ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.23  :  ಪ್ರತಿಯೊಬ್ಬರಲ್ಲಿಯೂ ಕಾನೂನು ಅರಿವು ಇದ್ದಾಗ ಮಾತ್ರ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬಹುದೆಂದು ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಹೇಳಿದರು.

ಎಸ್.ಜೆ.ಎಂ. ಡೆಂಟಲ್ ಕಾಲೇಜು ಆವರಣದಲ್ಲಿರುವ ಎಸ್.ಜೆ.ಎಂ.ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಐದು ವರ್ಷ ಹಾಗೂ ಮೂರು ವರ್ಷದ ಕಾನೂನು ಪದವಿ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳ ಪರಿಚಯಾತ್ಮಕ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

ಸಣ್ಣಪುಟ್ಟ ತಪ್ಪುಗಳನ್ನು ವಿದ್ಯಾರ್ಥಿಗಳು ತಿದ್ದಿಕೊಳ್ಳಬೇಕೆಂದು ಡಾ.ಹಾ.ಮಾ.ನಾಯಕ್ ಹೇಳುತ್ತಿದ್ದರು ಎನ್ನುವುದು ನೆನಪಿಸಿಕೊಂಡ ಬಸವಪ್ರಭು ಸ್ವಾಮೀಜಿ ವಿದ್ಯಾರ್ಥಿಗಳು ಶಿಸ್ತುಬದ್ದ ಜೀವನ ರೂಢಿಸಿಕೊಳ್ಳಬೇಕು. ಪಾಠ ಕೇಳುವ ಹಂಬಲದಿಂದ ಶಾಲೆ-ಕಾಲೇಜುಗಳಿಗೆ ಹೋಗಬೇಕು. ಏಕಾಗ್ರತೆಯಿಂದ ಯಾರು ಪಾಠ ಕೇಳುತ್ತಾರೋ ಅಂತಹ ವಿದ್ಯಾರ್ಥಿಗಳು ರ್ಯಾಂಕ್ ಪಡೆದು ತಾನು ಓದಿದ ಶಿಕ್ಷಣ ಸಂಸ್ಥೆಗೆ ಕೀರ್ತಿ ತರುತ್ತಾರೆ. ಪಾಠ ಕೇಳುವಾಗ ಮನಸ್ಸು ಬೇರೆ ಕಡೆ ಹೋಗಬಾರದು. ಗಮನ ಕೊಟ್ಟು ಪಾಠ ಕೇಳಿಸಿಕೊಳ್ಳುವವರು ಉತ್ತಮ ವಿದ್ಯಾರ್ಥಿಗಳಾಗಿ ಹೊರಹೊಮ್ಮುತ್ತಾರೆಂದು ತಿಳಿಸಿದರು.

ದೇಶದ ಕಾನೂನು ಪ್ರತಿಯೊಬ್ಬರನ್ನು ಕಾಪಾಡುತ್ತದೆ. ಆದರೆ ಪ್ರತಿ ಮನುಷ್ಯ ತನ್ನ ಜೀವ ಹಾಗೂ ಆಸ್ತಿಯನ್ನು ರಕ್ಷಿಸಿಕೊಳ್ಳಬೇಕಾದರೆ ಸ್ವಲ್ಪವಾದರೂ ಕಾನೂನು ತಿಳಿದುಕೊಂಡಿರಬೇಕು. ಆಗ ಮಾತ್ರ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದರು.

ಎಸ್.ಜೆ.ಎಂ.ಕಲಾ, ವಿಜ್ಞಾನ, ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಂಚಾಕ್ಷರಿ ಹೆಚ್.ಎಸ್. ಮಾತನಾಡಿ ಕಾನೂನು ವಿದ್ಯಾರ್ಥಿಗಳ ಪರಿಚಯಾತ್ಮಕ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ. ಪಠ್ಯದ ಜೊತೆಗೆ ವಿದ್ಯಾರ್ಥಿಗಳಿಗೆ ಕ್ರೀಡಾ, ಸಾಂಸ್ಕøತಿಕ, ಎನ್.ಎಸ್.ಎಸ್.ನಂತಹ ಚಟುವಟಿಕೆಗಳಿರಬೇಕು. ಶಿಕ್ಷಕರು ಹಾಗೂ ಪೋಷಕರುಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗುವಂತೆ ಮಕ್ಕಳನ್ನು ಪ್ರೋತ್ಸಾಹಿಸಿ ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಬೇಕೆಂದು ಕರೆ ನೀಡಿದರು.

ಕಾನೂನು ಪದವಿ ಪಡೆಯುವುದರಿಂದ ಕಾನೂನು ಚೆನ್ನಾಗಿ ತಿಳಿದುಕೊಂಡು ಸ್ವಾವಲಂಭಿಯಾಗಿ ಬದುಕಬಹುದು ಎಂದು ಕಾನೂನು ಶಿಕ್ಷಣದ ಮಹತ್ವ ತಿಳಿಸಿದರು.

ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಸಹೋದರ ಕೆ.ಸಿ.ನಾಗರಾಜ್ ಮಾತನಾಡುತ್ತ ಕಾನೂನು ಶಿಕ್ಷಣ ಪಡೆಯುತ್ತಿರುವ ನೀವುಗಳು ಮುಂದೆ ಪದವಿ ಪಡೆದ ನಂತರ ಸರ್ಕಾರಿ ನೌಕರಿಗೆ ಕಾಯಬೇಕೆಂದಿಲ್ಲ. ವಕೀಲರಾಗಿ ಸ್ವಾವಲಂಭಿಯಾಗಿ ಜೀವಿಸುವ ಅವಕಾಶವಿದೆ. ಮೂರು ಕ್ಲಾಸ್ ರೂ.ಗೆ ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಅನುದಾನದಲ್ಲಿ ಹತ್ತು ಲಕ್ಷ ರೂ.ಗಳನ್ನು ಕೊಡಿಸುವುದಾಗಿ ಭರವಸೆ ನೀಡಿದರು. ಕ್ರೀಡಾ ಇಲಾಖೆ ಜೊತೆ ಮಾತನಾಡಿ ಕ್ರೀಡೆಗೆ ಸಂಬಂಧಿಸಿದಂತೆ ಅನುದಾನವನ್ನು ಕೊಡಿಸುತ್ತೇನೆಂದು ಆಶ್ವಾಸನೆ ನೀಡಿದರು.
ವಿದ್ಯಾರ್ಥಿಗಳು ಗುರು-ಹಿರಿಯರನ್ನು ಗೌರವಿಸುವುದನ್ನು ಕಲಿಯಬೇಕು. ತರಗತಿಗೆ ತಪ್ಪಿಸಿಕೊಳ್ಳಬೇಡಿ ಎಂದು ಕಾನೂನು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಎಸ್.ಜೆ.ಎಂ.ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಎಸ್. ಮಾತನಾಡಿ 1993 ರಲ್ಲಿ ಎಸ್.ಜೆ.ಎಂ.ಕಾನೂನು ಮಹಾವಿದ್ಯಾಲಯ ಪ್ರಾರಂಭಗೊಂಡಿತು. ಮೂರು ರೂಂಗಳ ಅವಶ್ಯಕತೆಯಿದೆ. ಅದೇ ರೀತಿ ಮೂವರು ಶಿಕ್ಷಕರು, ಒಬ್ಬ ದೈಹಿಕ ಶಿಕ್ಷಕರನ್ನು ನೇಮಕಗೊಳಿಸಬೇಕೆಂದು ಬಸವಪ್ರಭು ಸ್ವಾಮೀಜಿಗಳಲ್ಲಿ ಕೋರಿದರು.

ಇಲ್ಲಿ ಶಿಕ್ಷಣ ಪಡೆದ ಇಬ್ಬರು ಹೈಕೋರ್ಟ್‍ನಲ್ಲಿ ಜಡ್ಜ್‍ಗಳಾಗಿದ್ದಾರೆ. ಎಂಟು ಮಂದಿ ಬೇರೆ ಬೇರೆ ಕಡೆ ನ್ಯಾಯಾಧೀಶರುಗಳಾಗಿದ್ದಾರೆ ಇಲ್ಲಿಯವರೆಗೂ 25 ಕ್ಕಿಂತ ಹೆಚ್ಚು ರ್ಯಾಂಕ್ ಪಡೆದುಕೊಂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಎಸ್.ಜೆ.ಎಂ.ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕರುಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!