ಇದೆ ರೀತಿ ಮುಂದುವರೆದರೆ ಹೋರಾಟ ಮಾಡ್ತೀವಿ : ಯಡಿಯೂರಪ್ಪ ವಾಗ್ದಾಳಿ

suddionenews
1 Min Read

ಬೆಂಗಳೂರು: ಬಹಳ ದಿನಗಳ ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಸರ್ಕಾರದ ಮೇಲೆ‌ ವಾಗ್ದಾಳಿ ನಡೆಸಿದ್ದಾರೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಸರ್ಕಾರದ ಮೇಲೆ ಹಿಡಿತವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಯ್ತು. ಚಕ್ರದಲ್ಲಿ ಗಾಳಿ ಇಲ್ಲದೆ ಮುಂದೆ ಹೋಗುತ್ತಿಲ್ಲ. ಅಪಾರ ಭರವಸೆ ನೀಡಿದ ಸರ್ಕಾರ, ಭರವಸೆ ಈಡೇರಿಸಲು ಆಗುತ್ತಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದರು ಅವರಿಗೆ ಹಿಡಿತವಿಲ್ಲ. ಆರು ತಿಂಗಳು ಸಮಯ ಕೊಟ್ಟಿದ್ದೇವೆ. ರಾಜ್ಯ ಸರ್ಕಾರ ಸುಧಾರಣೆ ಆಗುತ್ತದೆ ಎಂದು ಕಾದಿದ್ದೇ ಆಯ್ತು. ಆದರೆ ಏನು ಪ್ರಯೋಜನವಾಗಿಲ್ಲ.

 

ಇದೊಂದು ಜನ ವಿರೋಧಿ ಸರ್ಕಾರ. ಇದೆ ರೀತಿ ಮುಂದುವರೆದರೆ ರಾಜ್ಯದ ಉದ್ಧಗಲಕ್ಕೂ ಹೋರಾಟ ಮಾಡಲು ಮುಂದಾಗುತ್ತೇವೆ. ಈ ಹಿಂದೆ ಕೇಂದ್ರ ಅನುದಾನ ಕೊಡುವ ಮೊದಲು ರಾಜ್ಯ ಸರ್ಕಾರ ಹಣ ನೀಡುತ್ತಿತ್ತು. ಆದ್ರೆ ಈಗ ರಾಜ್ಯ ಸರ್ಕಾರ ಎಲ್ಲಾದಕ್ಕೂ ಕೇಂದ್ರದ ಕಡೆ ನೋಡುತ್ತಿದ್ದಾರೆ. ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್‌ ಸುರ್ಜೇವಾಲ ಅವರ ಭೇಟಿ ಚುನಾವಣೆಯ ಟಾರ್ಗೆಟ್ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *