Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನರೇಂದ್ರಮೋದಿಯವರನ್ನು ಗೆಲ್ಲಿಸಿಕೊಳ್ಳದಿದ್ದರೆ ನಮ್ಮಂತಹ ಮೂರ್ಖರು ಯಾರೂ ಇಲ್ಲ : ಎಂ.ಸಿ.ರಘುಚಂದನ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.07  : ಎಲ್ಲರೂ ಒಂದಾಗಿ ದುಡಿಯೋಣ. ಬಿಜೆಪಿಯನ್ನು ಬಲಪಡಿಸಿ ಮತ್ತೆ ನರೇಂದ್ರಮೋದಿಯನ್ನು ದೇಶದ ಪ್ರಧಾನಿಯನ್ನಾಗಿ ಮಾಡೋಣ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಎಂ.ಸಿ.ರಘುಚಂದನ್ ಮುಖಂಡರು ಹಾಗೂ ಕಾರ್ಯಕರ್ತರುಗಳಲ್ಲಿ ಮನವಿ ಮಾಡಿದರು.

ಚಳ್ಳಕೆರೆ ಪಟ್ಟಣದಲ್ಲಿ ಬುಧವಾರ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ನಮ್ಮ ಪಕ್ಷಕ್ಕೆ ಸೋಲಾಗಿದೆ. ಹೊಳಲ್ಕೆರೆಯಲ್ಲಿ ಎಂ.ಚಂದ್ರಪ್ಪ ಒಬ್ಬರೆ ಗೆದ್ದು ಶಾಸಕರಾಗಿದ್ದಾರೆ. ಪಾರ್ಲಿಮೆಂಟ್ ಕ್ಷೇತ್ರದ ಎಂಟು ತಾಲ್ಲೂಕುಗಳಲ್ಲಿ ಒಬ್ಬರೆ ಶಾಸಕರಿರುವುದರಿಂದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸಬೇಕಿದೆ. 2019 ರಲ್ಲಿಯೇ ನಾನು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೇಟ್ ಕೇಳಿದ್ದೆ. ಪಕ್ಷದ ವರಿಷ್ಠರು ಮುಂದಿನ ಸಾರಿ ಅವಕಾಶ ನೀಡುವುದಾಗಿ ಹೇಳಿದ್ದರಿಂದ ಸುಮ್ಮನಾದೆ. ಈಗಲೂ ನಾನು ಆಕಾಂಕ್ಷಿಯೇ. ಆದರೆ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಲಿ ಮನಃಪೂರ್ವಕವಾಗಿ ಗೆಲುವಿಗೆ ದುಡಿಯುತ್ತೇನೆಂದು ಭರವಸೆ ನೀಡಿದರು.

ಟಿಕೆಟ್, ಓಟಿನ ರಾಜಕಾರಣ ಮಾಡುವವನಲ್ಲ. ಹಿರಿಯರ ಸಲಹೆ, ಮಾರ್ಗದರ್ಶನ ಪಡೆದು ಪಕ್ಷ ಗಟ್ಟಿಗೊಳಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ನಾವು ಒಂದು ಸಮುದಾಯದ ವಿರುದ್ದ ಹೊರಟಿದ್ದೇವೆಂದು ಕೆಲವರು ಬಿಂಬಿಸಿದ್ದರು. ಯಾರ ಮೇಲೂ ನನಗಾಗಲಿ ನನ್ನ ತಂದೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪನವರಿಗಾಗಲಿ ಶತ್ರುತ್ವವಿಲ್ಲ.  ಎಲ್ಲರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತೇವೆ. ಯಾರು ವಿರೋಧಿಗಳಲ್ಲ. ಒಂದು ಕುಟುಂಬಕ್ಕೆ ಸೇರಿದವರು ಎನ್ನುವ ಭಾವನೆಯಿಂದ ಪಕ್ಷ ಬಲವರ್ಧನೆಗೆ ಶ್ರಮಿಸಬೇಕಿದೆ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪಕ್ಷ ಟಿಕೇಟ್ ಯಾರಿಗೆ ಕೊಡಲಿ ಬದ್ದತೆಯಿಟ್ಟುಕೊಂಡು ಕೆಲಸ ಮಾಡುತ್ತೇವೆ. ನರೇಂದ್ರಮೋದಿಯಂತಹ ಪುಣ್ಯಾತ್ಮನನ್ನು ಗೆಲ್ಲಿಸಿಕೊಳ್ಳದಿದ್ದರೆ ನಮ್ಮಂತಹ ಮೂರ್ಖರು ಯಾರೂ ಇಲ್ಲ. ಹಾಗಾಗಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯೋಣ ಎಂದು ಹೇಳಿದರು.

ಚಳ್ಳಕೆರೆ ಮಾಜಿ ಶಾಸಕ ಬಸವರಾಜ್ ಮಂಡಿಮಠ್, ಮಾಜಿ ಅಧ್ಯಕ್ಷ ಡಿ.ಸೋಮಶೇಖರ್ ಮಂಡಿಮಠ್, ಹಿರಿಯ ಮುಖಂಡರುಗಳಾದ ಜಯಪಾಲಯ್ಯ, ಭದ್ರಣ್ಣ, ಶಿವಪುತ್ರಪ್ಪ, ಪ್ರಸಾದ್, ವೀರಣ್ಣ, ಶ್ರೀಮತಿ ಪಾಲಮ್ಮ, ಶ್ರೀಮತಿ ರತ್ನಮ್ಮ, ಶ್ರೀಮತಿ ಸಾಕಮ್ಮ ಇನ್ನು ಅನೇಕರು ವೇದಿಕೆಯಲ್ಲಿದ್ದರು.
ಜಾಜೂರು, ನನ್ನಿವಾಳ, ಪರಶುರಾಂಪುರ, ತಳಕಿನಲ್ಲಿ ಕಾರ್ಯಕರ್ತರನ್ನು ಭೇಟಿಯಾಗಿ ಹುರಿದುಂಬಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!