ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್ : ಹಿಂಗ್ಯಾಕಂದ್ರು ಸಿಎಂ ಆರ್ಥಿಕ ಸಲಹೆಗಾರ..!

suddionenews
1 Min Read

ಕೊಪ್ಪಳ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನ ನೀಡಿದೆ. ಆದರೆ ಈ ಗ್ಯಾರಂಟಿಗಳನ್ನು ನೀಡಿದ ಮೇಲೆ ಸರ್ಕಾರಕ್ಕೆ ಸಾಕಷ್ಟು ನಷ್ಟವಾಗಿದೆ ಅಂತ ವಿರೋಧ ಪಕ್ಷ ಆಗಾಗ ಹೇಳಿದ್ರು, ಆ ರೀತಿಯ ನಷ್ಟವೇನು ಆಗಿಲ್ಲ ಅಂತ ಕಾಂಗ್ರೆಸ್ ಸರ್ಕಾರ ಸಮರ್ಥನೆ ಮಾಡಿಕೊಂಡೆ ಬಂದಿದೆ. ಆದರೆ ಈಗ ಸಿಎಂ ಆರ್ಥಿಕ ಸಲಹೆಗಾರರೇ ನೀಡಿರುವ ಹೇಳಿಕೆ ಅದನ್ನ ಸತ್ಯ ಎಂದೇ ನಂಬುವಂತೆ ಮಾಡಿದೆ.

 

ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ರ್ಯಾವಣಿಕದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ರೈತನೊಬ್ಬ ನಮ್ಮ ಹೊಲಕ್ಕೆ ಹೋಗುವುದಕ್ಕೆ ರಸ್ತೆ ಮಾಡಿಕೊಡಿ ಎಂದು ಮನವಿ ನೀಡಿದ್ದರು. ಈ ವೇಳೆ ಆ ರೈತನಿಗೆ ಉತ್ತರ ನೀಡಿದ ಬಸವರಾಜ್ ರಾಯರೆಡ್ಡಿ, ನಿಂಗೆ ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿದಂತೆ ಎಲ್ಲವೂ ಬಂದ್ ಮಾಡೋಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ಕೊಡ್ತೇನೆ ಎಂದು ಹೇಳಿದ್ದಾರೆ.

 

ಈ ಹೇಳಿಕೆ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂಬ ಮಾತುಗಳನ್ನ ಮತ್ತೆ ಉಚ್ಚರಿಸುತ್ತಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಬಡವರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮವಾಗಿದೆ. ಬ್ರಿಡ್ಜ್ ರಸ್ತೆಗಳ ದುರಸ್ತಿಗಾಗಿ ಶಾಸಕರಿಗೆ ಸ್ವಲ್ಪ ಹಣ ಕೊಡುತ್ತಿದ್ದೇವೆ. ಜೆಡಿಎಸ್ ಶಾಸಕರಿಗೂ ಕೊಡುತ್ತಿದ್ದೇವೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks