Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಮಂಡ್ಯ, ಡಿಸೆಂಬರ್ 20: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಅವರು ಇಂದು ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಪದಬಳಕೆಯಾಗಿರುವುದು ಸತ್ಯ :

ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ ಎಂದರು.

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ :

ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...