Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2ನೇ ಡೋಸ್ ಪಡೆಯದೆ ಹೋದರೆ ಬಸ್ ನಲ್ಲೂ ಪ್ರವೇಶವಿಲ್ಲ..!

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ಮೊದಲು ಮತ್ತು ಎರಡನೇ ಅಲೆಯಿಂದಾಗಿ ಜನ ಸಂಕಷ್ಟ ಅನುಭವಿಸಿದ್ದು ಅಷ್ಟಿಷ್ಟಲ್ಲ. ಮೂರನೆ ಅಲೆ ಕಾಣಿಸಿಕೊಳ್ಳೋದು ತುಂಬಾನೆ ವಿರಳ ಅಂತ ಹೇಳಲಾಗ್ತಾ ಇತ್ತು. ತಜ್ಞರು ಹೇಳಿದ ಸಮಯಕ್ಕೆ ಮೂರನೆ ಅಲೆಯ ಸೂಚನೆ ಇಲ್ಲದೆ ಇದ್ದ ಕಾರಣ, ಮೂರನೆ ಅಲೆ ಬರಲ್ಲ ಎಂದೇ ಭಾವಿಸಲಾಗಿತ್ತು. ಆದ್ರೆ ಇದೀಗ ಇದ್ದಕ್ಕಿದ್ದ ಹಾಗೆ ಮೂರನೇ ಅಲೆಯ ದರ್ಶನ ಎಲ್ಲೆಲ್ಲೂ ಹಬ್ಬುತ್ತಿದೆ.

ಮೂರನೇ ಅಲೆ ತಪ್ಪಿಸಲು ಸರ್ಕಾರ ಅಲರ್ಟ್ ಆಗಿದೆ. ಬಿಬಿಎಂಪಿ ಕೂಡ ಸಜ್ಜಾಗಿದೆ. ಮೂರನೇ ಅಲೆ ತಡೆಗೆ ಬಿಬಿಎಂಪಿ ಸೂಪರ್ ಪ್ಲಾನ್ ಮಾಡಿಕೊಂಡಿದೆ. ಹೊಸ ತಳಿ ತಡೆಗಟ್ಟೋಕೆ ಪಾಲಿಕೆಯಿಂದ ಸರ್ಕಾರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಿದೆ. ಕೊರೊನಾದಿಂದ ಬಚಾವ್ ಆಗಲು ವ್ಯಾಕ್ಸಿನ್ ಒಂದೇ ಮಾರ್ಗವೆಂದು ಭಾವಿಸಲಾಗಿದ್ದು, ಎಲ್ಲರಿಗೂ ವ್ಯಾಕ್ಸಿನ್ ನೀಡುವ ಗುರಿ ಹೊಂದಿದೆ.

 

ಎರಡನೇ ಡೋಸ್ ಪಡೆಯದಿದ್ರೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಅವಕಾಶವನ್ನೇ ತಪ್ಪಿಸಲು ನಿರ್ಧರಿಸಿದೆ. ಎರಡು ಡೋಸ್ ವ್ಯಾಕ್ಸಿನ್ ಪಡೆಯದವರು ಸಾರ್ವಜನಿಕರ ಸ್ಥಳಗಳಲ್ಲಿ ಹೋಗುವಂತಿಲ್ಲ ಎನ್ನಲಾಗಿದೆ.

ಅಷ್ಟೇ ಅಲ್ಲ ಬೆಂಗಳೂರು ಜನರ ಜೀವನಾಡಿ ಬಿಎಂಟಿಸಿ ಬಸ್ ಗೆ ಕೂಡ ಹತ್ತಿಸಲ್ಲವಂತೆ. ಬಿಎಂಟಿಸಿ ಹತ್ತಬೇಕು ಅಂದ್ರೂ ಸೆಕೆಂಡ್ ಡೋಸ್ ವ್ಯಾಕ್ಸಿನ್ ಪಡೆದಿರಬೇಕು. KSRTC, ಮೆಟ್ರೋ, ಮಾಲ್ ಗೆ ಹೋಗ್ಬೇಕಾದ್ರೂ ಎರಡನೇ ಡೋಸ್ ಪಡೆದಿರಲೇಬೇಕು ಎನ್ನಲಾಗಿದೆ.

ಈ ಕುರಿತು ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಸಿನೆಮಾ ಮಂದಿರ, ಮಾಲ್, ಮೆಟ್ರೋ, BMTC, KSRTCಗೆ ಈ ಕುರಿತ ಸೂಚ‌ನೆ ನೀಡಲು ಪಾಲಿಕೆ ಇಚ್ಛಿಸಿದೆ. ಆದೇಶ ಉಲ್ಲಂಘನೆ ಮಾಡಿದ್ರೆ ಸಂಬಂಧಪಟ್ಟ ಆಡಳಿತ ಮಂಡಳಿ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!