Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದಿನವಿಡೀ ಬಿಸಿ ನೀರು ಕುಡಿದ್ರೆ ಈ ಕಾಯಿಲೆ ಬರೋದು ಗ್ಯಾರಂಟಿ..!

---Advertisement---

 

ಮನುಷ್ಯ ದಿನದಲ್ಲಿ ಎರಡ್ಮೂರು ಲೀಟರ್ ನೀರು ಕುಡೊಯಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಅದೆಷ್ಟೋ ಜನ ಒಂದು ಲೀಟರ್ ನಷ್ಟು ನೀರನ್ನು ಕುಡಿಯುವುದಿಲ್ಲ. ಈಗಂತು ಮಳೆಯಿಂದಾಗಿ ಚಳಿಯ ವಾತಾವರಣ ಇರುವ ಕಾರಣ ಬಾಯಾರಿಕೆ ಆಗುವುದೇ ಇಲ್ಲ. ಹಲವರು ಬಿಸಿ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆದರೂ ನೀರು ಕುಡಿಯುವುದು ಕಡಿಮೆಯೇ ಸರಿ. ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿಯುವುದರಿಂದ ಗ್ಯಾಸ್ಟ್ರಿಕ್‌ ಸಮಸ್ಯೆ ಸೇರಿದಂತೆ ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು ಎಂದೇ ಹೇಳುತ್ತಾರೆ. ಆದರೆ ದಿನವಿಡೀ ಬಿಸಿ‌ನೀರು ಕುಡಿಯುವವರು ಆರೋಗ್ಯದ ಕಡೆ ಗಮನ ಕೊಡಬೇಕಾಗುತ್ತದೆ. ಅದರಿಂದ ಏನೆಲ್ಲಾ ಸಮಸ್ಯೆಗಳು ಬರುತ್ತವೆ ಗೊತ್ತಾ..?

 

* ಕೆಲವೊಬ್ಬರು ಬಿಸಿ‌ನೀರನ್ನು ಹೆಚ್ಚಾಗಿ ಕುಡಿಯುವುದರಿಂದ ಯಕೃತ್ತಿನ ಸಮಸ್ಯೆ ಉಂಟಾಗುತ್ತದೆ ಎಂದೇ ಭಾವಿಸುತ್ತಾರೆ. ಹೀಗಾಗಿ ಹೆಚ್ಚಿನ ಜನ ದಿನವಿಡೀ ಬಿಸಿ ನೀರು ಕುಡಿಯುವುದಿಲ್ಲ.

* ಬಿಸಿ ನೀರು ಹೆಚ್ಚಾಗಿ ಸೇವಿಸುವ ಕಾರಣ ಚರ್ಮದ ತ್ವಜೆ ಡಲ್ ಆಗುವ ಸಾಧ್ಯತೆ ಇರುತ್ತದೆ. ಹೆಚ್ಚು ಬಿಸಿ ಇರುವ ನೀರನ್ನು ಕುಡಿಯುವುದರಿಂದ ದೇಹ ಬೆವರುವುದಕ್ಕೆ ಕಾರಣವಾಗುತ್ತದೆ. ತುರಿಕೆ, ಚರ್ಮ ಸಂಬಂಧಿತ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ.

* ಬಿಸಿನೀರಿನಿಂದ ನಿಮ್ಮ ನಿದ್ರೆಗೆ ತೊಂದರೆಯಾಗಲಿದೆ. ಅತಿಯಾದ ಬಿಸಿನೀರಿನ ಸೇವನೆ ನಿದ್ದೆ ಬರಿಸದಂತೆ ಮಾಡಿಬಿಡುತ್ತದೆ.

* ನೀರು ಕುಡಿಯುವುದು ಆರೋಗ್ಯಕರವಾಗಿದ್ದು ಅದು ದೇಹವನ್ನು ಹೈಡ್ರೇಟ್ ಮಾಡುತ್ತದೆ ಎನ್ನುವುದು ನಿಜ. ಆದರೆ ನಿಮಗೆ ಬಾಯಾರಿಕೆ ಇಲ್ಲದಿರುವಾಗಲೂ ಆಗಾಗ್ಗೆ ಬಿಸಿನೀರನ್ನು ಕುಡಿಯುವುದರಿಂದ ದೇಹದಲ್ಲಿನ ನೀರಿನ ಸಾಂದ್ರತೆಯಲ್ಲಿ ಅಸಮತೋಲನವನ್ನು ಉಂಟುಮಾಡಬಹುದು, ಇದರಿಂದಾಗಿ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ.

ಬಿಸಿನೀರು ಕುಡಿಯುವುದರಿಂದ ಲಾಭಗಳು ಸಹ ಇದಾವೆ. ಅತಿಯಾಗಬಾರದು ಅಷ್ಟೇ. ಈಗಂತೂ ಮಳೆಗಾಲ ಆಗಿರುವ ಕಾರಣ ಹಲವರಲ್ಲಿ ಶೀತ, ನೆಗಡಿ ಸರ್ವೇ ಸಾಮಾನ್ಯ. ತಣ್ಣಗಿನ ನೀರು ಕುಡಿಯುವುದರಿಂದ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆದರೆ ಬೆಚ್ಚಗಿನ ನೀರು ಕುಡಿಯುವುದರಿಂದ ಶೀತವನ್ನು ಕಡಿಮೆ ಮಾಡಿಕೊಳ್ಳಬಹುದು. ಈ ಸಮಯದಲ್ಲಿ ದೇಹ ಉಷ್ಣತೆಯಿಂದ ಕೂಡಿರಬೇಕು. ಹೀಗಾಗಿ ಬಿಸಿನೀರು ಅದನ್ನು ಹೆಚ್ಚಿಸುತ್ತದೆ.
(ಈ ಎಲ್ಲಾ ಮಾಹಿತಿಯನ್ನು ಗೂಗಲ್ ನಲ್ಲಿ ರೆಫರೆನ್ಸ್ ಮಾಡಿ ಬರೆದಿರುವ ಕಾರಣ ವೆಬ್ಸೈಟ್ ಜವಬ್ದಾರಿಯಲ್ಲ)

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...