Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿಯಿಂದ ಹಣ ಪಡೆದಿದ್ದರೆ ಅದರ ತಪ್ಪು ಹೇಳೋಕೆ ಧೈರ್ಯ ಇರ್ತಾ ಇತ್ತಾ..?: ಹೆಚ್ ವಿಶ್ವನಾಥ್

---Advertisement---

ಮೈಸೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದಾಗ ಅದನ್ನು ಕೆಡವಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೆ ಸಹಾಯ ಮಾಡಿದವರಲ್ಲಿ ಮೊದಲಿಗರು ಹೆಚ್ ವಿಶ್ವನಾಥ್. ಇದೀಗ ಮತ್ತೆ ಕಾಂಗ್ರೆಸ್ ಸೇರುವುದಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ವಾಪಾಸ್ ಆಗುವ ಚರ್ಚೆ ನಡೆಸಿದ್ದಾರೆ. ಇದೀಗ ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಇದೆ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ಬಿಡುವುದಕ್ಕೆ ಸಿದ್ಧನಿದ್ದೇನೆ. ನಾನು ಹಿಡಿಯುವ ಧ್ವಜ ಕಾಲದ ಅನುಸಾರ ಬದಲಾಗಿರಬಹುದು. ಆದರೆ ನನ್ನ ತತ್ವಗಳು ಬದಲಾಗಿಲ್ಲ. ಬಿಜೆಪಿಯಿಂದ ಹಣ ಪಡೆದು ಸೇರಿದ್ದರೆ, ಈಗ ಅದರ ತಪ್ಪುಗಳನ್ನು ಹೇಳುವುದಕ್ಕೆ ಧೈರ್ಯ ಬರ್ತಾ ಇತ್ತಾ..? ಎಂದು ಪ್ರಶ್ನಿಸಿದ್ದಾರೆ.

ಐ ಯಾಮ್ ಎ ಕ್ಲೀನ್ ಮ್ಯಾನ್. ಇಷ್ಟು ವರ್ಷ ರಾಜಕೀಯದಲ್ಲಿದ್ದರು ಕೂಡ ಇಂದು ಚಿಕ್ಕ ಮನೆಯಲ್ಲಿಯೇ ಇದ್ದೇನೆ. ಅಪ್ಪನ ಜಮೀನಿನಲ್ಲಿಯೇ ದುಡಿದು ಮಕ್ಕಳನ್ನು ಸಾಕಿದ್ದೇನೆ. ಬಿಜೆಪಿ ಸರ್ಕಾರ ಬರೀ ಉಳ್ಳವರ ಪರ ಇದೆ. ಬರೀ ಸುಳ್ಳು ಹೇಳಿಕೊಂಡು ಓಡಾಡುತ್ತಿದೆ. ಭದ್ರಾವತಿಯಲ್ಲಿ ಉಕ್ಕು ಮತ್ತು ಕಬ್ಬಿಣದ ಕಾರ್ಖಾನೆ ಲಾಭದಲ್ಲಿದ್ದರು ಸರ್ಕಾರ ಮುಚ್ಚುವುದಕ್ಕೆ ಹೊರಟಿದೆ. ಆದರೂ ಮಾಜಿ ಸಿಎಂ ಯಡಿಯೂರಪ್ಪ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...