ಹಗುರವಾದ ಮಾತಾಡಿದರೆ ತಕ್ಕ ಉತ್ತರ ನೀಡಬೇಕಾಗುತ್ತದೆ : ಯತ್ನಾಳ್ ಗೆ ಎಚ್ಚರಿಕೆ ನೀಡಿದ ವಿಜಯೇಂದ್ರ

suddionenews
1 Min Read

ಚಿತ್ರದುರ್ಗ: ಬಾಯಿಗೆ ಬಂದಂತೆ ಮಾತನಾಡಲು ಈಗಲಾದರೂ ಬಿಡಿ ಹೀಗೆ ಹಗುರವಾಗಿ ಮಾತನಾಡಿದರೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಯತ್ನಾಳ್ ಹೇಳಿಕೆಗೆ ವಿಜಯೇಂದ್ರ ಟಾಂಗ್ ನೀಡಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಪದೇಪದೇ ಟೀಕಾ ಪ್ರಹಾರ ನಡೆಸುತ್ತಿರುವ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಯತ್ನಾಳ್ ಏನ್ ಮಾತನಾಡುತ್ತಾರೆ ಆ ಭಗವಂತನಿಗೆ ಗೊತ್ತು. ಯಡಿಯೂರಪ್ಪ ವೇದಿಕೆ ಮೇಲೆ ಮೇಲೆ ಹತ್ತಬಾರದು ಎಂದು ಹೇಳಿದ್ದಾರೆ. ಯಡಿಯೂರಪ್ಪನವರು ಮೂರ್ನಾಲ್ಕು ದಶಕದಿಂದ ರಾಜ್ಯದಲ್ಲಿ ರೈತರ ಪರ ಧ್ವನಿ ಎತ್ತಿದ ನಾಯಕ ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಸೇರಿ ಹಲವಾರು ಜನ ಪಕ್ಷ ಕಟ್ಟಿದ್ದಾರೆ ಅವರು ಪಕ್ಷ ಕಟ್ಟದಿದ್ದರೆ, ಕೆಲವರು ವೇದಿಕೆ ಹತ್ತುವ ಯೋಗ್ಯತೆ ಇರುತ್ತಿರಲಿಲ್ಲ. ಯಡಿಯೂರಪ್ಪ ಅವರ ಕೊಡುಗೆ ಏನು ಅಂತ ಅರ್ಥ ಮಾಡ್ಕೋಬೇಕು, ಮನಬಂದಂತೆ ಮಾತನಾಡುವುದನ್ನು ಬಿಡಬೇಕು ಇಲ್ಲವಾದರೆ ತಕ್ಕ ಉತ್ತರ ನೀಡಲಾಗುತ್ತದೆ ಎಂದರು.

ಸಿದ್ದರಾಮಯ್ಯ ಸರ್ಕಾರ ಅಹಿಂದ ಹೆಸರಿನಲ್ಲಿ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ ಎಂದು ಆಡಳಿತ ಪಕ್ಷದ ಶಾಸಕರು ಛೀಮಾರಿ ಹಾಕಿದ್ದಾರೆ. ಕಳೆದ ಎರಡು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರಕ್ಕೂ ಅನುದಾನ ನೀಡಿಲ್ಲ. ಭ್ರಷ್ಟಾಚಾರ ಕೂಡ ರಾಜ್ಯದಲ್ಲಿ ನಡೆಯುತ್ತಿದೆ. ಆಡಳಿತ ಸರ್ಕಾರ ಶಾಸಕರ ವಿಶ್ವಾಸ ಕೂಡ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

Share This Article
Leave a Comment

Leave a Reply

Your email address will not be published. Required fields are marked *