Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಕ್ರಮ ಮದ್ಯ ಮಾರಾಟ : ಕಾನೂನು ಕ್ರಮಕ್ಕೆ ರೈತ ಸಂಘ ಹಾಗೂ ಮಹಿಳಾ ಸಂಘಟನೆಗಳ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕು ಕ್ಯಾತಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಮಹಿಳಾ ಸಂಘಟನೆಗಳು ಹಾಗೂ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕ್ಯಾತಗೊಂಡನಹಳ್ಳಿ ಗ್ರಾಮದ ಹತ್ತು ಅಂಗಡಿಗಳಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟವಾಗುತ್ತಿರುವುದರಿಂದ ಚಿಕ್ಕವರಿಂದ ಹಿಡಿದು ದೊಡ್ಡವರತನಕ ದಿನವೂ ಮದ್ಯ ಸೇವಿಸಿ ಗಲಾಟೆ ಮಾಡುವುದರಿಂದ ಗ್ರಾಮದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ದಿನವಿಡಿ ಕೂಲಿ ಮಾಡಿ ಬರುವ ಹಣದಿಂದ ಗಂಡಸರು ಮದ್ಯ ಸೇವಿಸಿ ರಾತ್ರಿ ವೇಳೆಯಲ್ಲಿ ಮನೆಯಲ್ಲಿ ಹೆಂಡತಿ ಮಕ್ಕಳ ಮೇಲೆ ಹಲ್ಲೆ ನಡೆಸುವುದು ಸರ್ವೆ ಸಾಮಾನ್ಯವಾಗಿಬಿಟ್ಟಿದೆ.

ಈ ಸಂಬಂಧ ಅಬಕಾರಿ ಹಾಗೂ ಪೊಲೀಸ್ ಇಲಾಖೆಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಇದುವರೆವಿಗೂ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಕ್ರಮ ಮದ್ಯ ಮಾರಾಟ ತಡೆಗಟ್ಟಿ ಗ್ರಾಮದಲ್ಲಿ ನೆಮ್ಮದಿ ನೆಲೆಸುವಂತೆ ಮಾಡಿ ಎಂದು ಮಹಿಳೆಯರು ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.

ಕೃಷ್ಣಮೂರ್ತಿ, ಡಿಂಗ್ರಿನಾಗರಾಜ್, ಪುಟ್ಟಕ್ಕ, ಶಿವಮ್ಮ, ರಮೇಶ್, ತಿಪ್ಪಮ್ಮ, ಶಿಲ್ಪ, ಮಲ್ಲಮ್ಮ, ಸುಮಲತ, ರೈತ ಮುಖಂಡ ಕೆ.ಪಿ.ಭೂತಯ್ಯ, ಶಿವಕುಮಾರ್, ರಾಜಣ್ಣ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...